ದೇಶ- ವಿದೇಶ

ನಾನು ಮನುಷ್ಯ; ತಪ್ಪುಗಳನ್ನು ಮಾಡಿರಬಹುದು: ಸಂವಾದಲ್ಲಿ ಮೋದಿ

ಹೊಸದಿಲ್ಲಿ: ನಾನು ಮನುಷ್ಯ, ದೇವರಲ್ಲ ಹೀಗಾಗಿ ತಪ್ಪುಗಳನ್ನು ಮಾಡಿರಬಹುದು. ಆದರೆ, ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾನ್ಯ ವಿದ್ಯಾರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ‌ ಪದವಿಯವರೆಗೆ ಏರಿದ ಪ್ರಯಾಣವನ್ನು ಹಂಚಿಕೊಂಡಿರುವ ಮೋದಿ, ನಾನು ಮುಖ್ಯಮಂತ್ರಿಯಾದಾಗ, ಯಾವುದೇ ಅವಕಾಶ ಸಿಕ್ಕರು ಬಿಡುವುದಿಲ್ಲ ಎಂದು ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದೆ. ನನಗಾಗಿ ನಾನು ಏನನ್ನೂ ಮಾಡಿಕೊಂಡಿಲ್ಲ. ಆದರೂ, ನಾನು ಮನುಷ್ಯ ತಪ್ಪುಗಳನ್ನು ಮಾಡಿರಬಹುದು, ಆದರೆ ಕೆಟ್ಟ ಉದ್ದೇಶದಿಂದ ಯಾವುದೇ ತಪ್ಪು ಮಾಡಿಲ್ಲ. ಎಲ್ಲಾರ ತರ ನಾನು ಕೂಡ ಮನುಷ್ಯ ನಾನೇನು ದೇವರಲ್ಲ. ಉದ್ದೇಶಪೂರ್ವಕವಾಗಂತು ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಗುಜರಾತ್‌ ಮುಖ್ಯಮಂತ್ರಿ ಆದಾಗ, ನನ್ನ ಸರ್ಕಾರಿ ನಿವಾಸಕ್ಕೆ ನನ್ನ ಸ್ನೇಹಿತರು, ಶಿಕ್ಷಕರನ್ನು ಆಹ್ವಾನಿಸಿದ್ದೆ. ಆದರೆ, ಅವರು ನನ್ನನ್ನು ಮುಖ್ಯಮಂತ್ರಿಯಾಗಿ ನೋಡಿದ್ದರು. ಒಬ್ಬ ಸ್ನೇಹಿತನಾಗಿ ನೋಡಲೇ ಇಲ್ಲ ಎಂದು ಬೇಸರಿಸಿದರು.

ಯುವ ರಾಜಕಾರಣಿಗಳಿಗೆ ಮೋದಿ ಸಲಹೆ
ದೇಶಕ್ಕೆ ಸೇವೆ ಮಾಡಬೇಕು ಎನ್ನುವ ಧ್ಯೇಯೋದ್ದೇಶದೊಂದಿಗೆ ಯುವಕರು ರಾಜಕೀಯಕ್ಕೆ ಬರಬೇಕೇ ವಿನಹಃ ಯಾವುದೊ ಮಹತ್ವಾಕಾಂಕ್ಷೆಯೊಂದಿಗೆ ಅಲ್ಲ. ರಾಜಕೀಯಕ್ಕೆ ಬರುವುದೇ ಬೇರೆ ರಾಜಕೀಯದಲ್ಲಿ ಯಶಸ್ವಿಯಾಗುವುದೇ ಬೇರೆ. ನೀವು ರಾಜಕೀಯಕ್ಕೆ ಬಂದರೆ ಒಳ್ಳೇಯ ಉದ್ದೇಶದೊಂದಿಗೆ ಬರಬೇಕು ಎಂದು ಯುವಕರಿಗೆ ಮೋದಿ ಕರೆ ನೀಡಿದರು.

ಉದ್ಯಮಿಯಾಗಬೇಕೆನ್ನುವವರು ತಮ್ಮ ಕಂಪನಿಯ ಬೆಳವಣಿಗೆಯನ್ನು ನೋಡುತ್ತಾರೆ. ರಾಜಕಾರಣಿಯಾಗ ಬೇಕುನ್ನುವವರು ರಾಷ್ಟ್ರ ಮೊದಲು ಎನ್ನುತ್ತಾ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಲು ಸಿದ್ಧರಾಗಿರಬೇಕು. ಆಗ ಸಮಾಜ ಅವರನ್ನು ಒಪ್ಪಿಕೊಳ್ಳುತ್ತದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago