ದೇಶ- ವಿದೇಶ

ನಾನು ಮನುಷ್ಯ; ತಪ್ಪುಗಳನ್ನು ಮಾಡಿರಬಹುದು: ಸಂವಾದಲ್ಲಿ ಮೋದಿ

ಹೊಸದಿಲ್ಲಿ: ನಾನು ಮನುಷ್ಯ, ದೇವರಲ್ಲ ಹೀಗಾಗಿ ತಪ್ಪುಗಳನ್ನು ಮಾಡಿರಬಹುದು. ಆದರೆ, ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾನ್ಯ ವಿದ್ಯಾರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ‌ ಪದವಿಯವರೆಗೆ ಏರಿದ ಪ್ರಯಾಣವನ್ನು ಹಂಚಿಕೊಂಡಿರುವ ಮೋದಿ, ನಾನು ಮುಖ್ಯಮಂತ್ರಿಯಾದಾಗ, ಯಾವುದೇ ಅವಕಾಶ ಸಿಕ್ಕರು ಬಿಡುವುದಿಲ್ಲ ಎಂದು ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದೆ. ನನಗಾಗಿ ನಾನು ಏನನ್ನೂ ಮಾಡಿಕೊಂಡಿಲ್ಲ. ಆದರೂ, ನಾನು ಮನುಷ್ಯ ತಪ್ಪುಗಳನ್ನು ಮಾಡಿರಬಹುದು, ಆದರೆ ಕೆಟ್ಟ ಉದ್ದೇಶದಿಂದ ಯಾವುದೇ ತಪ್ಪು ಮಾಡಿಲ್ಲ. ಎಲ್ಲಾರ ತರ ನಾನು ಕೂಡ ಮನುಷ್ಯ ನಾನೇನು ದೇವರಲ್ಲ. ಉದ್ದೇಶಪೂರ್ವಕವಾಗಂತು ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಗುಜರಾತ್‌ ಮುಖ್ಯಮಂತ್ರಿ ಆದಾಗ, ನನ್ನ ಸರ್ಕಾರಿ ನಿವಾಸಕ್ಕೆ ನನ್ನ ಸ್ನೇಹಿತರು, ಶಿಕ್ಷಕರನ್ನು ಆಹ್ವಾನಿಸಿದ್ದೆ. ಆದರೆ, ಅವರು ನನ್ನನ್ನು ಮುಖ್ಯಮಂತ್ರಿಯಾಗಿ ನೋಡಿದ್ದರು. ಒಬ್ಬ ಸ್ನೇಹಿತನಾಗಿ ನೋಡಲೇ ಇಲ್ಲ ಎಂದು ಬೇಸರಿಸಿದರು.

ಯುವ ರಾಜಕಾರಣಿಗಳಿಗೆ ಮೋದಿ ಸಲಹೆ
ದೇಶಕ್ಕೆ ಸೇವೆ ಮಾಡಬೇಕು ಎನ್ನುವ ಧ್ಯೇಯೋದ್ದೇಶದೊಂದಿಗೆ ಯುವಕರು ರಾಜಕೀಯಕ್ಕೆ ಬರಬೇಕೇ ವಿನಹಃ ಯಾವುದೊ ಮಹತ್ವಾಕಾಂಕ್ಷೆಯೊಂದಿಗೆ ಅಲ್ಲ. ರಾಜಕೀಯಕ್ಕೆ ಬರುವುದೇ ಬೇರೆ ರಾಜಕೀಯದಲ್ಲಿ ಯಶಸ್ವಿಯಾಗುವುದೇ ಬೇರೆ. ನೀವು ರಾಜಕೀಯಕ್ಕೆ ಬಂದರೆ ಒಳ್ಳೇಯ ಉದ್ದೇಶದೊಂದಿಗೆ ಬರಬೇಕು ಎಂದು ಯುವಕರಿಗೆ ಮೋದಿ ಕರೆ ನೀಡಿದರು.

ಉದ್ಯಮಿಯಾಗಬೇಕೆನ್ನುವವರು ತಮ್ಮ ಕಂಪನಿಯ ಬೆಳವಣಿಗೆಯನ್ನು ನೋಡುತ್ತಾರೆ. ರಾಜಕಾರಣಿಯಾಗ ಬೇಕುನ್ನುವವರು ರಾಷ್ಟ್ರ ಮೊದಲು ಎನ್ನುತ್ತಾ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಲು ಸಿದ್ಧರಾಗಿರಬೇಕು. ಆಗ ಸಮಾಜ ಅವರನ್ನು ಒಪ್ಪಿಕೊಳ್ಳುತ್ತದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago