ದೇಶ- ವಿದೇಶ

ನಾನು ಮನುಷ್ಯ; ತಪ್ಪುಗಳನ್ನು ಮಾಡಿರಬಹುದು: ಸಂವಾದಲ್ಲಿ ಮೋದಿ

ಹೊಸದಿಲ್ಲಿ: ನಾನು ಮನುಷ್ಯ, ದೇವರಲ್ಲ ಹೀಗಾಗಿ ತಪ್ಪುಗಳನ್ನು ಮಾಡಿರಬಹುದು. ಆದರೆ, ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾನ್ಯ ವಿದ್ಯಾರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ‌ ಪದವಿಯವರೆಗೆ ಏರಿದ ಪ್ರಯಾಣವನ್ನು ಹಂಚಿಕೊಂಡಿರುವ ಮೋದಿ, ನಾನು ಮುಖ್ಯಮಂತ್ರಿಯಾದಾಗ, ಯಾವುದೇ ಅವಕಾಶ ಸಿಕ್ಕರು ಬಿಡುವುದಿಲ್ಲ ಎಂದು ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದೆ. ನನಗಾಗಿ ನಾನು ಏನನ್ನೂ ಮಾಡಿಕೊಂಡಿಲ್ಲ. ಆದರೂ, ನಾನು ಮನುಷ್ಯ ತಪ್ಪುಗಳನ್ನು ಮಾಡಿರಬಹುದು, ಆದರೆ ಕೆಟ್ಟ ಉದ್ದೇಶದಿಂದ ಯಾವುದೇ ತಪ್ಪು ಮಾಡಿಲ್ಲ. ಎಲ್ಲಾರ ತರ ನಾನು ಕೂಡ ಮನುಷ್ಯ ನಾನೇನು ದೇವರಲ್ಲ. ಉದ್ದೇಶಪೂರ್ವಕವಾಗಂತು ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಗುಜರಾತ್‌ ಮುಖ್ಯಮಂತ್ರಿ ಆದಾಗ, ನನ್ನ ಸರ್ಕಾರಿ ನಿವಾಸಕ್ಕೆ ನನ್ನ ಸ್ನೇಹಿತರು, ಶಿಕ್ಷಕರನ್ನು ಆಹ್ವಾನಿಸಿದ್ದೆ. ಆದರೆ, ಅವರು ನನ್ನನ್ನು ಮುಖ್ಯಮಂತ್ರಿಯಾಗಿ ನೋಡಿದ್ದರು. ಒಬ್ಬ ಸ್ನೇಹಿತನಾಗಿ ನೋಡಲೇ ಇಲ್ಲ ಎಂದು ಬೇಸರಿಸಿದರು.

ಯುವ ರಾಜಕಾರಣಿಗಳಿಗೆ ಮೋದಿ ಸಲಹೆ
ದೇಶಕ್ಕೆ ಸೇವೆ ಮಾಡಬೇಕು ಎನ್ನುವ ಧ್ಯೇಯೋದ್ದೇಶದೊಂದಿಗೆ ಯುವಕರು ರಾಜಕೀಯಕ್ಕೆ ಬರಬೇಕೇ ವಿನಹಃ ಯಾವುದೊ ಮಹತ್ವಾಕಾಂಕ್ಷೆಯೊಂದಿಗೆ ಅಲ್ಲ. ರಾಜಕೀಯಕ್ಕೆ ಬರುವುದೇ ಬೇರೆ ರಾಜಕೀಯದಲ್ಲಿ ಯಶಸ್ವಿಯಾಗುವುದೇ ಬೇರೆ. ನೀವು ರಾಜಕೀಯಕ್ಕೆ ಬಂದರೆ ಒಳ್ಳೇಯ ಉದ್ದೇಶದೊಂದಿಗೆ ಬರಬೇಕು ಎಂದು ಯುವಕರಿಗೆ ಮೋದಿ ಕರೆ ನೀಡಿದರು.

ಉದ್ಯಮಿಯಾಗಬೇಕೆನ್ನುವವರು ತಮ್ಮ ಕಂಪನಿಯ ಬೆಳವಣಿಗೆಯನ್ನು ನೋಡುತ್ತಾರೆ. ರಾಜಕಾರಣಿಯಾಗ ಬೇಕುನ್ನುವವರು ರಾಷ್ಟ್ರ ಮೊದಲು ಎನ್ನುತ್ತಾ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಲು ಸಿದ್ಧರಾಗಿರಬೇಕು. ಆಗ ಸಮಾಜ ಅವರನ್ನು ಒಪ್ಪಿಕೊಳ್ಳುತ್ತದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

13 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

18 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

35 mins ago

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

1 hour ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

2 hours ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

5 hours ago