ದೇಶ- ವಿದೇಶ

ನಾನು ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ: ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಹೇಳಿದ್ದಾರೆ.

ಏಪ್ರಿಲ್.23ರ ಚುನಾವಣೆಗೆ ಪಕ್ಷದ ಹೈಕಮಾಂಡ್‍ಗೆ ಅನುಮೋದನೆಗಾಗಿ ಕಳುಹಿಸಲಾದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಏಕೆಂದರೆ ಅವರು ಈ ಬಾರಿ ಪ್ರಚಾರ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಬಹುದೆಂದು ಅವರು ನಿರ್ಧರಿಸಿದ್ದರೆ, ಆದರೆ ಈಗ ಅವರ ಗಮನ ಬಿಜೆಪಿ ಮತ್ತು ಎನ್‍ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡುವತ್ತಾಗಿತ್ತು ಎಂದು ಬಿಜೆಪಿಯ ಪಕ್ಷದ ನಾಯಕರು ಸ್ಷಷ್ಪಪಡಿಸಿದ್ದಾರೆ.

ನಾನು ಸ್ಪರ್ಧೆಯಲ್ಲಿ ಅಥವಾ ಪಟ್ಟಿಯಲ್ಲಿಲ್ಲ. ಈ ಚುನಾವಣೆಯಲ್ಲಿ, ನನ್ನ ಪಾತ್ರ ತಮಿಳುನಾಡಿನಾದ್ಯಂತ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದು. ಇದೀಗ, ಪಕ್ಷವು ಪುದುಚೇರಿ ಮತ್ತು ಕೇರಳದಲ್ಲಿ ಏಪ್ರಿಲ್ 7 ರವರೆಗೆ ಮತ್ತು ಅಂದಿನಿಂದ ಏಪ್ರಿಲ್ 23 ರವರೆಗೆ ತಮಿಳುನಾಡಿನಲ್ಲಿ ಪ್ರಚಾರ ಮಾಡುವ ಜವಾಬ್ದಾರಿಯನ್ನು ನನಗೆ ನೀಡಿದೆ. ಇದು ಪಕ್ಷ ನನಗೆ ನೀಡಿದ ಜವಾಬ್ದಾರಿ. ನಾನು ಆ ಜವಾಬ್ದಾರಿಯನ್ನು ಪೂರೈಸುತ್ತೇನೆ,” ಎಂದು ಕಣ್ಣೂರಿನಿಂದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಸುದ್ದಿಗಾರರಿಗೆ ತಿಳಿಸಿದರು.

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

5 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

5 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

11 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

14 hours ago