ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್ಗೆ ತೆರಳಲು ಹೊರಟಿದ್ದ ರಾಹುಲ್ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್ ಗಾಂಧಿ ಅವರು, ನಾವು ಸಂಭಲ್ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಭಲ್ಗೆ ಭೇಟಿ ನೀಡುವುದು ನನ್ನ ಹಕ್ಕು.
ಪೊಲೀಸರ ಜೊತೆ ಒಬ್ಬನೇ ತೆರಳಲು ನಾನು ಸಿದ್ಧನಿದ್ದೇನೆ. ಆದರೂ ನನಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರಿದ್ದಾರೆ.
ಕೆಲವು ದಿನಗಳ ನಂತರ ನನ್ನ ಭೇಟಿಗೆ ಅವಕಾಶ ನೀಡುವುದಾಗಿ ಹೇಳುತ್ತಾರೆ. ಆದರೆ ಇದು ಲೋಕಸಭೆ ವಿರೋಧ ಪಕ್ಷದ ನಾಯಕನ ಹಕ್ಕುಗಳಿಗೆ ವಿರುದ್ಧವಾಗಿದೆ. ಅವರು ನನಗೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.
ನಾನು ಸಂಭಲ್ಗೆ ಭೇಟಿ ನೀಡಿ ಅಲ್ಲಿ ಜನರನ್ನು ಭೇಟಿ ಮಾಡಿ ಏನಾಯಿತು ಎಂದು ತಿಳಿದುಕೊಳ್ಳಲು ಬಯಸುತ್ತೇನೆ. ಆದರೆ ನನ್ನ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ಪೊಲೀಸರ ವಿರುದ್ಧ ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…