ದೇಶ- ವಿದೇಶ

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೆ : ಪುಟಿನ್ ಭೇಟಿ ಬಳಿಕ ಟ್ರಂಪ್ ಪುನರುಚ್ಚಾರ

ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.

ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ಹೊಸದಿಲ್ಲಿ ಸಮರ್ಥಿಸಿಕೊಳ್ಳುತ್ತಿದೆ.

‘ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು ಐದು ಯುದ್ಧಗಳನ್ನು ಅವುಗಳ ಅಂತ್ಯದವರೆಗೆ ಮಾತುಕತೆ ನಡೆಸಿದ್ದೇನೆ ಮತ್ತು ಆ ಯುದ್ಧಗಳು ಕಠಿಣವಾಗಿದ್ದವು…ʼ ಎಂದು ಶುಕ್ರವಾರ ಅಲಾಸ್ಕಾದ ಆಂಕಾರೇಜ್‌ನಲ್ಲಿ ಪುಟಿನ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಶೃಂಗಸಭೆಯ ಬಳಿಕ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದ್ದಾರೆ.

ಈ ಮಧ್ಯೆ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಯಾವುದೇ ಒಪ್ಪಂದವಿಲ್ಲದೆ ಉಭಯ ನಾಯಕರ ನಡುವಿನ ಸಭೆ ಅಂತ್ಯಗೊಂಡಿದೆ.

‘ನೀವು ಭಾರತ ಮತ್ತು ಪಾಕಿಸ್ತಾನವನ್ನು ಒಮ್ಮೆ ನೋಡಿ. ಅವರು ವಿಮಾನಗಳನ್ನು ಗಾಳಿಯಲ್ಲಿ ಹೊಡೆದುರುಳಿಸಿದ್ದರು. ಆರರಿಂದ ಏಳು ವಿಮಾನಗಳು ಕೆಳಕ್ಕುರುಳಿದ್ದವು. ಅವರು ಪರಮಾಣು ಯುದ್ಧಕ್ಕೂ ಮುಂದಾಗಿದ್ದರು. ಆದರೆ ನಾನು ಸಮಸ್ಯೆಯನ್ನು ಬಗೆಹರಿಸಿದೆನುʼ ಎಂದು ಟ್ರಂಪ್ ಹೇಳಿದ್ದಾರೆ.

ಯುದ್ಧಗಳು ‘ತುಂಬಾ ಕೆಟ್ಟವು‘ ಎಂದು ಒತ್ತಿ ಹೇಳಿದ ಟ್ರಂಪ್, ‘ಅವುಗಳನ್ನು ಕೊನೆಗೊಳಿಸುವ, ಜನರನ್ನು ಒಟ್ಟುಗೂಡಿಸುವ ಸಾಮರ್ಥ್ಯʼ ತನಗೆ ಇದೆ ಎಂದು ತೋರುತ್ತದೆ. ಇದಕ್ಕಾಗಿ ನಾನು ‘ಯುನೈಟೆಡ್ ಸ್ಟೇಟ್ಸ್‌ನ ಶಕ್ತಿಯನ್ನುʼ ಬಳಸುತ್ತಿದ್ದೇನೆ ಎಂದು ಟ್ರಂಪ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

18 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

27 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

41 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago