ದೇಶ- ವಿದೇಶ

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೆ : ಪುಟಿನ್ ಭೇಟಿ ಬಳಿಕ ಟ್ರಂಪ್ ಪುನರುಚ್ಚಾರ

ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.

ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ಹೊಸದಿಲ್ಲಿ ಸಮರ್ಥಿಸಿಕೊಳ್ಳುತ್ತಿದೆ.

‘ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು ಐದು ಯುದ್ಧಗಳನ್ನು ಅವುಗಳ ಅಂತ್ಯದವರೆಗೆ ಮಾತುಕತೆ ನಡೆಸಿದ್ದೇನೆ ಮತ್ತು ಆ ಯುದ್ಧಗಳು ಕಠಿಣವಾಗಿದ್ದವು…ʼ ಎಂದು ಶುಕ್ರವಾರ ಅಲಾಸ್ಕಾದ ಆಂಕಾರೇಜ್‌ನಲ್ಲಿ ಪುಟಿನ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಶೃಂಗಸಭೆಯ ಬಳಿಕ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದ್ದಾರೆ.

ಈ ಮಧ್ಯೆ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಯಾವುದೇ ಒಪ್ಪಂದವಿಲ್ಲದೆ ಉಭಯ ನಾಯಕರ ನಡುವಿನ ಸಭೆ ಅಂತ್ಯಗೊಂಡಿದೆ.

‘ನೀವು ಭಾರತ ಮತ್ತು ಪಾಕಿಸ್ತಾನವನ್ನು ಒಮ್ಮೆ ನೋಡಿ. ಅವರು ವಿಮಾನಗಳನ್ನು ಗಾಳಿಯಲ್ಲಿ ಹೊಡೆದುರುಳಿಸಿದ್ದರು. ಆರರಿಂದ ಏಳು ವಿಮಾನಗಳು ಕೆಳಕ್ಕುರುಳಿದ್ದವು. ಅವರು ಪರಮಾಣು ಯುದ್ಧಕ್ಕೂ ಮುಂದಾಗಿದ್ದರು. ಆದರೆ ನಾನು ಸಮಸ್ಯೆಯನ್ನು ಬಗೆಹರಿಸಿದೆನುʼ ಎಂದು ಟ್ರಂಪ್ ಹೇಳಿದ್ದಾರೆ.

ಯುದ್ಧಗಳು ‘ತುಂಬಾ ಕೆಟ್ಟವು‘ ಎಂದು ಒತ್ತಿ ಹೇಳಿದ ಟ್ರಂಪ್, ‘ಅವುಗಳನ್ನು ಕೊನೆಗೊಳಿಸುವ, ಜನರನ್ನು ಒಟ್ಟುಗೂಡಿಸುವ ಸಾಮರ್ಥ್ಯʼ ತನಗೆ ಇದೆ ಎಂದು ತೋರುತ್ತದೆ. ಇದಕ್ಕಾಗಿ ನಾನು ‘ಯುನೈಟೆಡ್ ಸ್ಟೇಟ್ಸ್‌ನ ಶಕ್ತಿಯನ್ನುʼ ಬಳಸುತ್ತಿದ್ದೇನೆ ಎಂದು ಟ್ರಂಪ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

2 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

18 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

19 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

20 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago