ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.
ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ಹೊಸದಿಲ್ಲಿ ಸಮರ್ಥಿಸಿಕೊಳ್ಳುತ್ತಿದೆ.
‘ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು ಐದು ಯುದ್ಧಗಳನ್ನು ಅವುಗಳ ಅಂತ್ಯದವರೆಗೆ ಮಾತುಕತೆ ನಡೆಸಿದ್ದೇನೆ ಮತ್ತು ಆ ಯುದ್ಧಗಳು ಕಠಿಣವಾಗಿದ್ದವು…ʼ ಎಂದು ಶುಕ್ರವಾರ ಅಲಾಸ್ಕಾದ ಆಂಕಾರೇಜ್ನಲ್ಲಿ ಪುಟಿನ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಶೃಂಗಸಭೆಯ ಬಳಿಕ ಫಾಕ್ಸ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದ್ದಾರೆ.
ಈ ಮಧ್ಯೆ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಯಾವುದೇ ಒಪ್ಪಂದವಿಲ್ಲದೆ ಉಭಯ ನಾಯಕರ ನಡುವಿನ ಸಭೆ ಅಂತ್ಯಗೊಂಡಿದೆ.
‘ನೀವು ಭಾರತ ಮತ್ತು ಪಾಕಿಸ್ತಾನವನ್ನು ಒಮ್ಮೆ ನೋಡಿ. ಅವರು ವಿಮಾನಗಳನ್ನು ಗಾಳಿಯಲ್ಲಿ ಹೊಡೆದುರುಳಿಸಿದ್ದರು. ಆರರಿಂದ ಏಳು ವಿಮಾನಗಳು ಕೆಳಕ್ಕುರುಳಿದ್ದವು. ಅವರು ಪರಮಾಣು ಯುದ್ಧಕ್ಕೂ ಮುಂದಾಗಿದ್ದರು. ಆದರೆ ನಾನು ಸಮಸ್ಯೆಯನ್ನು ಬಗೆಹರಿಸಿದೆನುʼ ಎಂದು ಟ್ರಂಪ್ ಹೇಳಿದ್ದಾರೆ.
ಯುದ್ಧಗಳು ‘ತುಂಬಾ ಕೆಟ್ಟವು‘ ಎಂದು ಒತ್ತಿ ಹೇಳಿದ ಟ್ರಂಪ್, ‘ಅವುಗಳನ್ನು ಕೊನೆಗೊಳಿಸುವ, ಜನರನ್ನು ಒಟ್ಟುಗೂಡಿಸುವ ಸಾಮರ್ಥ್ಯʼ ತನಗೆ ಇದೆ ಎಂದು ತೋರುತ್ತದೆ. ಇದಕ್ಕಾಗಿ ನಾನು ‘ಯುನೈಟೆಡ್ ಸ್ಟೇಟ್ಸ್ನ ಶಕ್ತಿಯನ್ನುʼ ಬಳಸುತ್ತಿದ್ದೇನೆ ಎಂದು ಟ್ರಂಪ್ ತಿಳಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…