ವಾಷಿಂಗ್ಟನ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ. ಶುಕ್ರವಾರ ಮುಂಜಾನೆ ಮಿರ್ ಅಲಿಯಲ್ಲಿರುವ ಖಡ್ಡಿ ಕೋಟೆಯ ಮೇಲಿನ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು. ಈ ನಡುವೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸಿದ್ದಾರೆ.
ಇದನ್ನು ಓದು: ಮೋದಿಗೆ ಟ್ರಂಪ್ ಕಂಡರೆ ಭಯ : ರಾಹುಲ್ ಗಾಂಧಿ ಟೀಕೆ
ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, ಉಭಯ ದೇಶಗಳು ಬಯಸಿದರೆ ಸಂಘರ್ಷವನ್ನು ಸುಲಭವಾಗಿ ಪರಿಹರಿಸಬಲ್ಲೆ ಎಂದು ಹೇಳಿದರು. ಇದು ಬಹುತೇಕ ಕೊನೆಯ ಆಯ್ಕೆಯಾಗಿದೆ. ಇನ್ನು ಉಭಯ ದೇಶಗಳ ನಡುವೆ ಯುದ್ಧ ನಡೆಯುತ್ತಿದೆ ಎಂದು ಅವರು ನಂಬುತ್ತಾರೆ. ನಾನು ಅದನ್ನು ಪರಿಹರಿಸಬೇಕಾದರೆ, ಅದು ನನಗೆ ಸುಲಭ. ಈ ಮಧ್ಯೆ, ನಾನು ಅಮೆರಿಕವನ್ನು ನಡೆಸಬೇಕು. ಆದರೆ ನಾನು ಯುದ್ಧಗಳನ್ನು ಪರಿಹರಿಸಲು ಇಷ್ಟಪಡುತ್ತೇನೆ. ಟ್ರಂಪ್ ಪ್ರಕಾರ, ಅಫ್ಘಾನಿಸ್ತಾನ-ಪಾಕಿಸ್ತಾನ ಸಂಘರ್ಷದಂತಹ ದಶಕಗಳಷ್ಟು ಹಳೆಯದಾದ ವಿವಾದವನ್ನು ಪರಿಹರಿಸುವುದು ಅವರಿಗೆ ಕಷ್ಟಕರವಾದ ಕೆಲಸವಲ್ಲವಂತೆ. ಪ್ರಾಣ ಮತ್ತು ಆಸ್ತಿಪಾಸ್ತಿ ನಷ್ಟವನ್ನು ತಡೆಗಟ್ಟುವಲ್ಲಿ ತಾನು ಹೆಮ್ಮೆಪಡುತ್ತೇನೆ ಎಂದು ಅವರು ಮತ್ತಷ್ಟು ಹೇಳಿದರು. ಏಕೆ ಗೊತ್ತಾ? ಜನರು ಸಾಯುವುದನ್ನು ತಡೆಯುವುದು ನನಗೆ ಇಷ್ಟ. ನಾನು ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಮತ್ತು ಈ ಯುದ್ಧದಲ್ಲಿ ನಾನು ಯಶಸ್ವಿಯಾಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…