ವಾಷಿಂಗ್ಟನ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ. ಶುಕ್ರವಾರ ಮುಂಜಾನೆ ಮಿರ್ ಅಲಿಯಲ್ಲಿರುವ ಖಡ್ಡಿ ಕೋಟೆಯ ಮೇಲಿನ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು. ಈ ನಡುವೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸಿದ್ದಾರೆ.
ಇದನ್ನು ಓದು: ಮೋದಿಗೆ ಟ್ರಂಪ್ ಕಂಡರೆ ಭಯ : ರಾಹುಲ್ ಗಾಂಧಿ ಟೀಕೆ
ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, ಉಭಯ ದೇಶಗಳು ಬಯಸಿದರೆ ಸಂಘರ್ಷವನ್ನು ಸುಲಭವಾಗಿ ಪರಿಹರಿಸಬಲ್ಲೆ ಎಂದು ಹೇಳಿದರು. ಇದು ಬಹುತೇಕ ಕೊನೆಯ ಆಯ್ಕೆಯಾಗಿದೆ. ಇನ್ನು ಉಭಯ ದೇಶಗಳ ನಡುವೆ ಯುದ್ಧ ನಡೆಯುತ್ತಿದೆ ಎಂದು ಅವರು ನಂಬುತ್ತಾರೆ. ನಾನು ಅದನ್ನು ಪರಿಹರಿಸಬೇಕಾದರೆ, ಅದು ನನಗೆ ಸುಲಭ. ಈ ಮಧ್ಯೆ, ನಾನು ಅಮೆರಿಕವನ್ನು ನಡೆಸಬೇಕು. ಆದರೆ ನಾನು ಯುದ್ಧಗಳನ್ನು ಪರಿಹರಿಸಲು ಇಷ್ಟಪಡುತ್ತೇನೆ. ಟ್ರಂಪ್ ಪ್ರಕಾರ, ಅಫ್ಘಾನಿಸ್ತಾನ-ಪಾಕಿಸ್ತಾನ ಸಂಘರ್ಷದಂತಹ ದಶಕಗಳಷ್ಟು ಹಳೆಯದಾದ ವಿವಾದವನ್ನು ಪರಿಹರಿಸುವುದು ಅವರಿಗೆ ಕಷ್ಟಕರವಾದ ಕೆಲಸವಲ್ಲವಂತೆ. ಪ್ರಾಣ ಮತ್ತು ಆಸ್ತಿಪಾಸ್ತಿ ನಷ್ಟವನ್ನು ತಡೆಗಟ್ಟುವಲ್ಲಿ ತಾನು ಹೆಮ್ಮೆಪಡುತ್ತೇನೆ ಎಂದು ಅವರು ಮತ್ತಷ್ಟು ಹೇಳಿದರು. ಏಕೆ ಗೊತ್ತಾ? ಜನರು ಸಾಯುವುದನ್ನು ತಡೆಯುವುದು ನನಗೆ ಇಷ್ಟ. ನಾನು ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಮತ್ತು ಈ ಯುದ್ಧದಲ್ಲಿ ನಾನು ಯಶಸ್ವಿಯಾಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…