ವಾಷಿಂಗ್ಟನ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ. ಶುಕ್ರವಾರ ಮುಂಜಾನೆ ಮಿರ್ ಅಲಿಯಲ್ಲಿರುವ ಖಡ್ಡಿ ಕೋಟೆಯ ಮೇಲಿನ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು. ಈ ನಡುವೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸಿದ್ದಾರೆ.
ಇದನ್ನು ಓದು: ಮೋದಿಗೆ ಟ್ರಂಪ್ ಕಂಡರೆ ಭಯ : ರಾಹುಲ್ ಗಾಂಧಿ ಟೀಕೆ
ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, ಉಭಯ ದೇಶಗಳು ಬಯಸಿದರೆ ಸಂಘರ್ಷವನ್ನು ಸುಲಭವಾಗಿ ಪರಿಹರಿಸಬಲ್ಲೆ ಎಂದು ಹೇಳಿದರು. ಇದು ಬಹುತೇಕ ಕೊನೆಯ ಆಯ್ಕೆಯಾಗಿದೆ. ಇನ್ನು ಉಭಯ ದೇಶಗಳ ನಡುವೆ ಯುದ್ಧ ನಡೆಯುತ್ತಿದೆ ಎಂದು ಅವರು ನಂಬುತ್ತಾರೆ. ನಾನು ಅದನ್ನು ಪರಿಹರಿಸಬೇಕಾದರೆ, ಅದು ನನಗೆ ಸುಲಭ. ಈ ಮಧ್ಯೆ, ನಾನು ಅಮೆರಿಕವನ್ನು ನಡೆಸಬೇಕು. ಆದರೆ ನಾನು ಯುದ್ಧಗಳನ್ನು ಪರಿಹರಿಸಲು ಇಷ್ಟಪಡುತ್ತೇನೆ. ಟ್ರಂಪ್ ಪ್ರಕಾರ, ಅಫ್ಘಾನಿಸ್ತಾನ-ಪಾಕಿಸ್ತಾನ ಸಂಘರ್ಷದಂತಹ ದಶಕಗಳಷ್ಟು ಹಳೆಯದಾದ ವಿವಾದವನ್ನು ಪರಿಹರಿಸುವುದು ಅವರಿಗೆ ಕಷ್ಟಕರವಾದ ಕೆಲಸವಲ್ಲವಂತೆ. ಪ್ರಾಣ ಮತ್ತು ಆಸ್ತಿಪಾಸ್ತಿ ನಷ್ಟವನ್ನು ತಡೆಗಟ್ಟುವಲ್ಲಿ ತಾನು ಹೆಮ್ಮೆಪಡುತ್ತೇನೆ ಎಂದು ಅವರು ಮತ್ತಷ್ಟು ಹೇಳಿದರು. ಏಕೆ ಗೊತ್ತಾ? ಜನರು ಸಾಯುವುದನ್ನು ತಡೆಯುವುದು ನನಗೆ ಇಷ್ಟ. ನಾನು ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಮತ್ತು ಈ ಯುದ್ಧದಲ್ಲಿ ನಾನು ಯಶಸ್ವಿಯಾಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…