ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭೆ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ಇವಿಎಂ ವಿರುದ್ಧ ಎಸ್ ಪಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು. ಇನ್ನು ಇವರ ಹೇಳಿಕೆ ರಾಹುಲ್ ಗಾಂಧಿ, ದಯಾನಿಧಿ ಮಾರನ್ ಸೇರಿ ಪ್ರತಿಪಕ್ಷ ನಾಯಕರು ಬೆಂಚು ಕುಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಉತ್ತರ ಪ್ರದೇಶಕ್ಕೆ ಬಹಳ ಅನ್ಯಾಯವಾಗಿದೆ. ಮೂಲಸೌಕರ್ಯಗಳ ವಿಚಾರದಲ್ಲಿ ಮಾತ್ರ ಅನ್ಯಾಯವಾಗಿಲ್ಲ. ಮೋದಿ ಅವರು ತಾನು ದತ್ತು ಪಡೆದ ಗ್ರಾಮ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಆ ಗ್ರಾಮ ಇನ್ನೂ ಅಭಿವೃದ್ಧಿಯಾಗಿಲ್ಲ. ದತ್ತು ಪಡೆದ ಮೇಲೆ ಅಭಿವೃದ್ಧಿ ಮಾಡದೆ ಅನಾಥ ಮಾಡುವುದು ಸರಿಯಲ್ಲ ಎಂದರು.
ಜೊತೆಗೆ ಅಗ್ನಿವೀರ್ ಮೂಲಕ ರಕ್ಷಣಾ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ನಾವು ಎಂದಿಗೂ ಆ ಯೋಜನೆಯನ್ನ ಸ್ವೀಕರಿಸುವುದಿಲ್ಲ. ಇಂಡಿಯಾ ಒಕ್ಕೂಟ ಯಾವಾಗ ಅಧಿಕಾರಕ್ಕೆ ಬಂದರೂ ಅದನ್ನ ರದ್ದು ಮಾಡುತ್ತೇವೆ ಎಂದು ಹೇಳಿದರು
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…