ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭೆ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ಇವಿಎಂ ವಿರುದ್ಧ ಎಸ್ ಪಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು. ಇನ್ನು ಇವರ ಹೇಳಿಕೆ ರಾಹುಲ್ ಗಾಂಧಿ, ದಯಾನಿಧಿ ಮಾರನ್ ಸೇರಿ ಪ್ರತಿಪಕ್ಷ ನಾಯಕರು ಬೆಂಚು ಕುಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಉತ್ತರ ಪ್ರದೇಶಕ್ಕೆ ಬಹಳ ಅನ್ಯಾಯವಾಗಿದೆ. ಮೂಲಸೌಕರ್ಯಗಳ ವಿಚಾರದಲ್ಲಿ ಮಾತ್ರ ಅನ್ಯಾಯವಾಗಿಲ್ಲ. ಮೋದಿ ಅವರು ತಾನು ದತ್ತು ಪಡೆದ ಗ್ರಾಮ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಆ ಗ್ರಾಮ ಇನ್ನೂ ಅಭಿವೃದ್ಧಿಯಾಗಿಲ್ಲ. ದತ್ತು ಪಡೆದ ಮೇಲೆ ಅಭಿವೃದ್ಧಿ ಮಾಡದೆ ಅನಾಥ ಮಾಡುವುದು ಸರಿಯಲ್ಲ ಎಂದರು.
ಜೊತೆಗೆ ಅಗ್ನಿವೀರ್ ಮೂಲಕ ರಕ್ಷಣಾ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ನಾವು ಎಂದಿಗೂ ಆ ಯೋಜನೆಯನ್ನ ಸ್ವೀಕರಿಸುವುದಿಲ್ಲ. ಇಂಡಿಯಾ ಒಕ್ಕೂಟ ಯಾವಾಗ ಅಧಿಕಾರಕ್ಕೆ ಬಂದರೂ ಅದನ್ನ ರದ್ದು ಮಾಡುತ್ತೇವೆ ಎಂದು ಹೇಳಿದರು
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…