ದೇಶ- ವಿದೇಶ

ಇವಿಎಂ ಬಗ್ಗೆ ಭರವಸೆ ಇಲ್ಲ, ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ : ಅಖಿಲೇಶ್ ಯಾದವ್‌

ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್‌ ಪಿ ನಾಯಕ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಲೋಕಸಭೆ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ಇವಿಎಂ ವಿರುದ್ಧ ಎಸ್‌ ಪಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು. ಇನ್ನು ಇವರ ಹೇಳಿಕೆ ರಾಹುಲ್‌ ಗಾಂಧಿ, ದಯಾನಿಧಿ ಮಾರನ್‌ ಸೇರಿ ಪ್ರತಿಪಕ್ಷ ನಾಯಕರು ಬೆಂಚು ಕುಟ್ಟಿ ಬೆಂಬಲ ವ್ಯಕ್ತಪಡಿಸಿದರು.

ಬಳಿಕ ಉತ್ತರ ಪ್ರದೇಶಕ್ಕೆ ಬಹಳ ಅನ್ಯಾಯವಾಗಿದೆ. ಮೂಲಸೌಕರ್ಯಗಳ ವಿಚಾರದಲ್ಲಿ ಮಾತ್ರ ಅನ್ಯಾಯವಾಗಿಲ್ಲ. ಮೋದಿ ಅವರು ತಾನು ದತ್ತು ಪಡೆದ ಗ್ರಾಮ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಆ ಗ್ರಾಮ ಇನ್ನೂ ಅಭಿವೃದ್ಧಿಯಾಗಿಲ್ಲ. ದತ್ತು ಪಡೆದ ಮೇಲೆ ಅಭಿವೃದ್ಧಿ ಮಾಡದೆ ಅನಾಥ ಮಾಡುವುದು ಸರಿಯಲ್ಲ ಎಂದರು.

ಜೊತೆಗೆ ಅಗ್ನಿವೀರ್‌ ಮೂಲಕ ರಕ್ಷಣಾ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ.  ನಾವು ಎಂದಿಗೂ ಆ ಯೋಜನೆಯನ್ನ ಸ್ವೀಕರಿಸುವುದಿಲ್ಲ. ಇಂಡಿಯಾ ಒಕ್ಕೂಟ ಯಾವಾಗ ಅಧಿಕಾರಕ್ಕೆ ಬಂದರೂ ಅದನ್ನ ರದ್ದು ಮಾಡುತ್ತೇವೆ ಎಂದು ಹೇಳಿದರು

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

5 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

7 hours ago