ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭೆ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ಇವಿಎಂ ವಿರುದ್ಧ ಎಸ್ ಪಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು. ಇನ್ನು ಇವರ ಹೇಳಿಕೆ ರಾಹುಲ್ ಗಾಂಧಿ, ದಯಾನಿಧಿ ಮಾರನ್ ಸೇರಿ ಪ್ರತಿಪಕ್ಷ ನಾಯಕರು ಬೆಂಚು ಕುಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಉತ್ತರ ಪ್ರದೇಶಕ್ಕೆ ಬಹಳ ಅನ್ಯಾಯವಾಗಿದೆ. ಮೂಲಸೌಕರ್ಯಗಳ ವಿಚಾರದಲ್ಲಿ ಮಾತ್ರ ಅನ್ಯಾಯವಾಗಿಲ್ಲ. ಮೋದಿ ಅವರು ತಾನು ದತ್ತು ಪಡೆದ ಗ್ರಾಮ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಆ ಗ್ರಾಮ ಇನ್ನೂ ಅಭಿವೃದ್ಧಿಯಾಗಿಲ್ಲ. ದತ್ತು ಪಡೆದ ಮೇಲೆ ಅಭಿವೃದ್ಧಿ ಮಾಡದೆ ಅನಾಥ ಮಾಡುವುದು ಸರಿಯಲ್ಲ ಎಂದರು.
ಜೊತೆಗೆ ಅಗ್ನಿವೀರ್ ಮೂಲಕ ರಕ್ಷಣಾ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ನಾವು ಎಂದಿಗೂ ಆ ಯೋಜನೆಯನ್ನ ಸ್ವೀಕರಿಸುವುದಿಲ್ಲ. ಇಂಡಿಯಾ ಒಕ್ಕೂಟ ಯಾವಾಗ ಅಧಿಕಾರಕ್ಕೆ ಬಂದರೂ ಅದನ್ನ ರದ್ದು ಮಾಡುತ್ತೇವೆ ಎಂದು ಹೇಳಿದರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…