ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭೆ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ಇವಿಎಂ ವಿರುದ್ಧ ಎಸ್ ಪಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು. ಇನ್ನು ಇವರ ಹೇಳಿಕೆ ರಾಹುಲ್ ಗಾಂಧಿ, ದಯಾನಿಧಿ ಮಾರನ್ ಸೇರಿ ಪ್ರತಿಪಕ್ಷ ನಾಯಕರು ಬೆಂಚು ಕುಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಉತ್ತರ ಪ್ರದೇಶಕ್ಕೆ ಬಹಳ ಅನ್ಯಾಯವಾಗಿದೆ. ಮೂಲಸೌಕರ್ಯಗಳ ವಿಚಾರದಲ್ಲಿ ಮಾತ್ರ ಅನ್ಯಾಯವಾಗಿಲ್ಲ. ಮೋದಿ ಅವರು ತಾನು ದತ್ತು ಪಡೆದ ಗ್ರಾಮ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಆ ಗ್ರಾಮ ಇನ್ನೂ ಅಭಿವೃದ್ಧಿಯಾಗಿಲ್ಲ. ದತ್ತು ಪಡೆದ ಮೇಲೆ ಅಭಿವೃದ್ಧಿ ಮಾಡದೆ ಅನಾಥ ಮಾಡುವುದು ಸರಿಯಲ್ಲ ಎಂದರು.
ಜೊತೆಗೆ ಅಗ್ನಿವೀರ್ ಮೂಲಕ ರಕ್ಷಣಾ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ನಾವು ಎಂದಿಗೂ ಆ ಯೋಜನೆಯನ್ನ ಸ್ವೀಕರಿಸುವುದಿಲ್ಲ. ಇಂಡಿಯಾ ಒಕ್ಕೂಟ ಯಾವಾಗ ಅಧಿಕಾರಕ್ಕೆ ಬಂದರೂ ಅದನ್ನ ರದ್ದು ಮಾಡುತ್ತೇವೆ ಎಂದು ಹೇಳಿದರು
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…