ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ ನಾವು ಖರ್ಚು ಮಾಡುತ್ತೇವೆ. ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜಕೀಯ ಹಿನ್ನೆಲೆ ಇಲ್ಲದ ಕೃಷಿಕ ಕುಟುಂಬದಿಂದ ಬಂದ ನನಗೆ ನನ್ನ ಇತಿಮಿತಿಗಳು ಗೊತ್ತಿವೆ. ಹೊಸ ಪಕ್ಷ ಪ್ರಾರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕೆಲವೊಮ್ಮೆ ಆತ್ಮಸಾಕ್ಷಿಗೆ ವಿರುದ್ಧವಾಗಿ ಮಾತನಾಡಬೇಕಾಗುತ್ತದೆ. ಆದರೂ ಕೆಲವು ವಿಷಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾದು ನೋಡೋಣ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…