ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ ನಾವು ಖರ್ಚು ಮಾಡುತ್ತೇವೆ. ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜಕೀಯ ಹಿನ್ನೆಲೆ ಇಲ್ಲದ ಕೃಷಿಕ ಕುಟುಂಬದಿಂದ ಬಂದ ನನಗೆ ನನ್ನ ಇತಿಮಿತಿಗಳು ಗೊತ್ತಿವೆ. ಹೊಸ ಪಕ್ಷ ಪ್ರಾರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕೆಲವೊಮ್ಮೆ ಆತ್ಮಸಾಕ್ಷಿಗೆ ವಿರುದ್ಧವಾಗಿ ಮಾತನಾಡಬೇಕಾಗುತ್ತದೆ. ಆದರೂ ಕೆಲವು ವಿಷಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾದು ನೋಡೋಣ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…