Mysore
25
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಎಚ್‌ಡಿಕೆ ಮೀಟ್‌ ಮಾಡಿದ್ದೇಕೆ ಎಂದು ನಾಳೆ ಹೇಳುತ್ತೇನೆ: ಸಚಿವ ಸತೀಶ್‌ ಜಾರಕಿಹೊಳಿ

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.

Tags:
error: Content is protected !!