ದೇಶ- ವಿದೇಶ

ಲೋಕಸಮರ 2024: ನಾನು ಎಎಪಿಗೆ ಮತ ಹಾಕುತ್ತೇನೆ ಎಂದ ರಾಹುಲ್‌ ಗಾಂಧಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ದೆಹಲಿ ಮಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಹಾಗೂ ನಾನು (ರಾಹುಲ್‌ ಗಾಂಧಿ) ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್‌ ಕಾಂಗ್ರೆಸ್‌ ಪಕ್ಷದ ಗುರುತಿರುವ ಬಟನ್‌ ಒತ್ತಿದರೇ, ನಾನು ಎಎಪಿ ಪಕ್ಷದ ಬಟನ್‌ ಒತ್ತಲಿದ್ದೇನೆ ಎಂದು ಹೇಳುವ ಮೂಲಕ ಇಂಡಿಯಾ ಮೈತ್ರಿ ಕೂಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬುದನ್ನು ಬೃಹತ್‌ ರ್ಯಾಲಿಯಲ್ಲಿ ತೋರಿಸಿದ್ದಾರೆ.

ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಅದಕ್ಕಾಗಿ ಕಾಂಗ್ರೆಸ್‌ ಮತ್ತು ಎಎಪಿ ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಮದನ್‌ ಬಿ ಲೋಕೂರ್‌, ಸಜಿತ್‌ ಶಾ ಹಾಗೂ ಹಿರಿಯ ಪತ್ರಕರ್ತ ಎನ್‌. ರಾಮ್‌ ಅವರು ಪ್ರಧಾನಿ ಮೋದಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಪತ್ರ ಬರೆದಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಷಯಗಳ ಬಗೆಗಿನ ಚರ್ಚೆಗೆ ಬನ್ನಿ ಎಂದು ಕಾಂಗ್ರೆಸ್‌ ನಾಯಕ ಸವಾಲೆಸೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

13 mins ago

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

25 mins ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

36 mins ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌…

1 hour ago

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

2 hours ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

2 hours ago