ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ ಹತ್ತಿಕ್ಕಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
ಪಿಟಿಐಗೆ ಬುಧವಾರ(ಮೇ.22) ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದರೂ, ನನಗೆ ಪ್ರಧಾನಿಯಾಗುವ ಉದ್ದೇಶವಿಲ್ಲ. ಸರ್ವಧಿಕಾರದಿಂದ ದೇಶವನ್ನು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ.
ಇಂಡಿಯಾ ಬಣದಿಂದ ಪ್ರಧಾನಿ ಯಾರಾಗಲಿದ್ದಾರೆ ಎಂಬುದನ್ನು ಲೋಕಸಭಾ ಚುನಾವಣೆ ಫಲಿತಾಂಶ ಜೂನ್ ೪ ರಂದು ಪ್ರಕಟಗೊಂಡ ಬಳಿಕ ನಿರ್ಧರಿಸಲಾಗುವುದು. ಇಂಡಿಯಾ ಮೈತ್ರಿಕೂಟ ೩೦೦ ಸ್ಥಾನಗಳನ್ನು ಗೆದ್ದು, ಸರ್ಕಾರ ರಚಿಸಲಿದೆ. ಮೈತ್ರಿಯು ಉತ್ತಮ, ಸ್ಥಿರ ಸರ್ಕಾರ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಎಂದು ತಮ್ಮನ್ನು ತಾವು ಪರಿಗಣಿಸುತ್ತೀರಾ ಎಂಬ ಪ್ರಶ್ನೆಗೆ ಅಂತಹ ಯಾವ ಉದ್ದೇಶವಿಲ್ಲ. ಕೇವಲ ೨೨ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಅತ್ಯಂತ ಸಣ್ಣ ಪಕ್ಷ ನಮ್ಮದು ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯಲಿವೆ. ಮೈತ್ರಿಕೂಟದ ನಾಯಕರು ಒಟ್ಟಿಗೆ ಸೇರಿ ನಿರ್ಧರಿಸುತ್ತೇವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…