ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ ಹತ್ತಿಕ್ಕಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
ಪಿಟಿಐಗೆ ಬುಧವಾರ(ಮೇ.22) ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದರೂ, ನನಗೆ ಪ್ರಧಾನಿಯಾಗುವ ಉದ್ದೇಶವಿಲ್ಲ. ಸರ್ವಧಿಕಾರದಿಂದ ದೇಶವನ್ನು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ.
ಇಂಡಿಯಾ ಬಣದಿಂದ ಪ್ರಧಾನಿ ಯಾರಾಗಲಿದ್ದಾರೆ ಎಂಬುದನ್ನು ಲೋಕಸಭಾ ಚುನಾವಣೆ ಫಲಿತಾಂಶ ಜೂನ್ ೪ ರಂದು ಪ್ರಕಟಗೊಂಡ ಬಳಿಕ ನಿರ್ಧರಿಸಲಾಗುವುದು. ಇಂಡಿಯಾ ಮೈತ್ರಿಕೂಟ ೩೦೦ ಸ್ಥಾನಗಳನ್ನು ಗೆದ್ದು, ಸರ್ಕಾರ ರಚಿಸಲಿದೆ. ಮೈತ್ರಿಯು ಉತ್ತಮ, ಸ್ಥಿರ ಸರ್ಕಾರ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಎಂದು ತಮ್ಮನ್ನು ತಾವು ಪರಿಗಣಿಸುತ್ತೀರಾ ಎಂಬ ಪ್ರಶ್ನೆಗೆ ಅಂತಹ ಯಾವ ಉದ್ದೇಶವಿಲ್ಲ. ಕೇವಲ ೨೨ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಅತ್ಯಂತ ಸಣ್ಣ ಪಕ್ಷ ನಮ್ಮದು ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯಲಿವೆ. ಮೈತ್ರಿಕೂಟದ ನಾಯಕರು ಒಟ್ಟಿಗೆ ಸೇರಿ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…