ದೇಶ- ವಿದೇಶ

ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಗಿ ರದ್ದು: ಸುಪ್ರೀಂ ಸೂಚನೆ

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕೋರ್ಟ್‌ ನಿಗದಿಪಡಿಸಿದೆ.

ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ.ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.

ಕಠಿಣ ಕಾನೂನುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಕಳ್ಳಸಾಗಣೆ ಮತ್ತು ಬಲವಂತದ ಬಾಲ ಕಾರ್ಮಿಕ ಪದ್ಧತಿ ಹೆಚ್ಚುತ್ತಿದೆ. ಆದ್ದರಿಂದ ಈ ಕ್ರಮ ಕೈಗೊಳ್ಳಿ ಎಂದು ಖಡಕ್‌ ಸೂಚನೆ ನೀಡಿದೆ.

ಇನ್ನು 2020ರಿಂದ ಸುಮಾರು 80,000 ಮಕ್ಕಳು ಪತ್ತೆಯಾಗುತ್ತಿಲ್ಲ ಎಂದು ಕೇಂದ್ರವು ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

3 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

5 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

16 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

18 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

19 hours ago