ದೇಶ- ವಿದೇಶ

ಮನೆಯ ಶಾಂತಿ ಕಾಪಾಡಲು ಪತಿ ಹೊರಹೋಗುವುದೇ ಏಕೈಕ ಮಾರ್ಗವಾದರೆ ಅದನ್ನೇ ಸೂಚಿಸಬೇಕು: ಮದ್ರಾಸ್ ಹೈಕೋರ್ಟ್

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ.

ಮನೆಯಲ್ಲಿ ಪತಿ ಇರುವುದನ್ನು ಕಂಡು ಹೆದರುವ ಮಹಿಳೆಯರ ಬಗ್ಗೆ ನ್ಯಾಯಾಲಯಗಳು ಅಸಡ್ಡೆ ತೋರಬಾರದು ಎಂದು ನ್ಯಾಯಮೂರ್ತಿ ಆರ್ ಎನ್ ಮಂಜುಳಾ ತಿಳಿಸಿದರು.

“ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರ ಮನೆಯಲ್ಲಿ ಶಾಂತಿ ನೆಲೆಸುತ್ತದೆ ಎನ್ನುವುದೇ ಏಕೈಕ ಮಾರ್ಗವಾಗಿದ್ದರೆ ಪ್ರತಿವಾದಿ ತನ್ನದೇ ಆದ ಇತರ ವಸತಿ ಸೌಕರ್ಯ ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನೂ ಪರಿಗಣಿಸದೆ ನ್ಯಾಯಾಲಯಗಳು ಆದೇಶ ನೀಡಬೇಕು. ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಇದ್ದರೆ ಒಳ್ಳೆಯದು. ಆದರೆ ಅದು ಇಲ್ಲದಿದ್ದರೆ ಅಂತಹ ವಸತಿ ವ್ಯವಸ್ಥೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು” ಎಂದು ನ್ಯಾಯಾಲಯ ಹೇಳಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಆದೇಶಗಳು ಪ್ರಾಯೋಗಿಕ ಮತ್ತು ಕಾರ್ಯಸಾಧುವಾಗಿರಬೇಕು. ಮಹಿಳೆ ತನ್ನ ಮನೆಯೊಳಗೆ ಸುರಕ್ಷಿತವಾಗಿದ್ದಾಳೆ ಎಂಬದನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯವಾಗಿ ಇಂತಹ ರಕ್ಷಣಾ ಆದೇಶಗಳನ್ನು ರವಾನಿಸಲಾಗುತ್ತದೆ. ಮಹಿಳೆ ಗಂಡನ ಇರುವಿಕೆಯಿಂದ ಹೆದರಿ ಚೀರುವಂತಹ ಸನ್ನಿವೇಶವಿದ್ದರೆ ನ್ಯಾಯಾಲಯಗಳು ಹೆಂಡತಿಗೆ ಕಿರುಕುಳ ಕೊಡದಂತೆ ಆತನಿಗೆ ಹೇಳಿದರಷ್ಟೇ ಸಾಲದು. ಬದಲಿಗೆ, ಆತ ಮನೆಯಲ್ಲಿರಲು ಅವಕಾಶ ನೀಡಬಾರದು ಎಂದು ನ್ಯಾಯಮೂರ್ತಿಯವರು ಅಭಿಪ್ರಾಯಪಟ್ಟರು.

ನಿಂದಿಸುವ ಮತ್ತು ಅಶಿಸ್ತಿನಿಂದ ವರ್ತಿಸುವ ತನ್ನ ಗಂಡನನ್ನು ಮನೆ ತೊರೆಯುವಂತೆ ಆದೇಶಿಸಲು ನಿರಾಕರಿಸಿದ್ದ ಜಿಲ್ಲಾ ನ್ಯಾಯಾಲಯವೊಂದರ ಆದೇಶವನ್ನು ವೃತ್ತಿಯಲ್ಲಿ ವಕೀಲರಾಗಿರುವ ಮಹಿಳೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತನ್ನ ಮತ್ತು ತನ್ನ ಕೆಲಸದ ಬಗ್ಗೆ ಗಂಡನ ವರ್ತನೆ ಉತ್ತಮವಾಗಿಲ್ಲ. ಆತ ಆಗಾಗ್ಗೆ ತನ್ನನ್ನು ನಿಂದಿಸುತ್ತಾನೆ ಮತ್ತು ಮನೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುತ್ತಾನೆ ಎಂದು ಆಕೆ ದೂರು ನೀಡಿದ್ದರು.

andolana

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

7 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

8 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

8 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

9 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

9 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

9 hours ago