ದೇಶ- ವಿದೇಶ

ಮನೆಯ ಶಾಂತಿ ಕಾಪಾಡಲು ಪತಿ ಹೊರಹೋಗುವುದೇ ಏಕೈಕ ಮಾರ್ಗವಾದರೆ ಅದನ್ನೇ ಸೂಚಿಸಬೇಕು: ಮದ್ರಾಸ್ ಹೈಕೋರ್ಟ್

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ.

ಮನೆಯಲ್ಲಿ ಪತಿ ಇರುವುದನ್ನು ಕಂಡು ಹೆದರುವ ಮಹಿಳೆಯರ ಬಗ್ಗೆ ನ್ಯಾಯಾಲಯಗಳು ಅಸಡ್ಡೆ ತೋರಬಾರದು ಎಂದು ನ್ಯಾಯಮೂರ್ತಿ ಆರ್ ಎನ್ ಮಂಜುಳಾ ತಿಳಿಸಿದರು.

“ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರ ಮನೆಯಲ್ಲಿ ಶಾಂತಿ ನೆಲೆಸುತ್ತದೆ ಎನ್ನುವುದೇ ಏಕೈಕ ಮಾರ್ಗವಾಗಿದ್ದರೆ ಪ್ರತಿವಾದಿ ತನ್ನದೇ ಆದ ಇತರ ವಸತಿ ಸೌಕರ್ಯ ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನೂ ಪರಿಗಣಿಸದೆ ನ್ಯಾಯಾಲಯಗಳು ಆದೇಶ ನೀಡಬೇಕು. ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಇದ್ದರೆ ಒಳ್ಳೆಯದು. ಆದರೆ ಅದು ಇಲ್ಲದಿದ್ದರೆ ಅಂತಹ ವಸತಿ ವ್ಯವಸ್ಥೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು” ಎಂದು ನ್ಯಾಯಾಲಯ ಹೇಳಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಆದೇಶಗಳು ಪ್ರಾಯೋಗಿಕ ಮತ್ತು ಕಾರ್ಯಸಾಧುವಾಗಿರಬೇಕು. ಮಹಿಳೆ ತನ್ನ ಮನೆಯೊಳಗೆ ಸುರಕ್ಷಿತವಾಗಿದ್ದಾಳೆ ಎಂಬದನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯವಾಗಿ ಇಂತಹ ರಕ್ಷಣಾ ಆದೇಶಗಳನ್ನು ರವಾನಿಸಲಾಗುತ್ತದೆ. ಮಹಿಳೆ ಗಂಡನ ಇರುವಿಕೆಯಿಂದ ಹೆದರಿ ಚೀರುವಂತಹ ಸನ್ನಿವೇಶವಿದ್ದರೆ ನ್ಯಾಯಾಲಯಗಳು ಹೆಂಡತಿಗೆ ಕಿರುಕುಳ ಕೊಡದಂತೆ ಆತನಿಗೆ ಹೇಳಿದರಷ್ಟೇ ಸಾಲದು. ಬದಲಿಗೆ, ಆತ ಮನೆಯಲ್ಲಿರಲು ಅವಕಾಶ ನೀಡಬಾರದು ಎಂದು ನ್ಯಾಯಮೂರ್ತಿಯವರು ಅಭಿಪ್ರಾಯಪಟ್ಟರು.

ನಿಂದಿಸುವ ಮತ್ತು ಅಶಿಸ್ತಿನಿಂದ ವರ್ತಿಸುವ ತನ್ನ ಗಂಡನನ್ನು ಮನೆ ತೊರೆಯುವಂತೆ ಆದೇಶಿಸಲು ನಿರಾಕರಿಸಿದ್ದ ಜಿಲ್ಲಾ ನ್ಯಾಯಾಲಯವೊಂದರ ಆದೇಶವನ್ನು ವೃತ್ತಿಯಲ್ಲಿ ವಕೀಲರಾಗಿರುವ ಮಹಿಳೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತನ್ನ ಮತ್ತು ತನ್ನ ಕೆಲಸದ ಬಗ್ಗೆ ಗಂಡನ ವರ್ತನೆ ಉತ್ತಮವಾಗಿಲ್ಲ. ಆತ ಆಗಾಗ್ಗೆ ತನ್ನನ್ನು ನಿಂದಿಸುತ್ತಾನೆ ಮತ್ತು ಮನೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುತ್ತಾನೆ ಎಂದು ಆಕೆ ದೂರು ನೀಡಿದ್ದರು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago