ದೇಶ- ವಿದೇಶ

ಮನೆಯ ಶಾಂತಿ ಕಾಪಾಡಲು ಪತಿ ಹೊರಹೋಗುವುದೇ ಏಕೈಕ ಮಾರ್ಗವಾದರೆ ಅದನ್ನೇ ಸೂಚಿಸಬೇಕು: ಮದ್ರಾಸ್ ಹೈಕೋರ್ಟ್

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ.

ಮನೆಯಲ್ಲಿ ಪತಿ ಇರುವುದನ್ನು ಕಂಡು ಹೆದರುವ ಮಹಿಳೆಯರ ಬಗ್ಗೆ ನ್ಯಾಯಾಲಯಗಳು ಅಸಡ್ಡೆ ತೋರಬಾರದು ಎಂದು ನ್ಯಾಯಮೂರ್ತಿ ಆರ್ ಎನ್ ಮಂಜುಳಾ ತಿಳಿಸಿದರು.

“ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರ ಮನೆಯಲ್ಲಿ ಶಾಂತಿ ನೆಲೆಸುತ್ತದೆ ಎನ್ನುವುದೇ ಏಕೈಕ ಮಾರ್ಗವಾಗಿದ್ದರೆ ಪ್ರತಿವಾದಿ ತನ್ನದೇ ಆದ ಇತರ ವಸತಿ ಸೌಕರ್ಯ ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನೂ ಪರಿಗಣಿಸದೆ ನ್ಯಾಯಾಲಯಗಳು ಆದೇಶ ನೀಡಬೇಕು. ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಇದ್ದರೆ ಒಳ್ಳೆಯದು. ಆದರೆ ಅದು ಇಲ್ಲದಿದ್ದರೆ ಅಂತಹ ವಸತಿ ವ್ಯವಸ್ಥೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು” ಎಂದು ನ್ಯಾಯಾಲಯ ಹೇಳಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಆದೇಶಗಳು ಪ್ರಾಯೋಗಿಕ ಮತ್ತು ಕಾರ್ಯಸಾಧುವಾಗಿರಬೇಕು. ಮಹಿಳೆ ತನ್ನ ಮನೆಯೊಳಗೆ ಸುರಕ್ಷಿತವಾಗಿದ್ದಾಳೆ ಎಂಬದನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯವಾಗಿ ಇಂತಹ ರಕ್ಷಣಾ ಆದೇಶಗಳನ್ನು ರವಾನಿಸಲಾಗುತ್ತದೆ. ಮಹಿಳೆ ಗಂಡನ ಇರುವಿಕೆಯಿಂದ ಹೆದರಿ ಚೀರುವಂತಹ ಸನ್ನಿವೇಶವಿದ್ದರೆ ನ್ಯಾಯಾಲಯಗಳು ಹೆಂಡತಿಗೆ ಕಿರುಕುಳ ಕೊಡದಂತೆ ಆತನಿಗೆ ಹೇಳಿದರಷ್ಟೇ ಸಾಲದು. ಬದಲಿಗೆ, ಆತ ಮನೆಯಲ್ಲಿರಲು ಅವಕಾಶ ನೀಡಬಾರದು ಎಂದು ನ್ಯಾಯಮೂರ್ತಿಯವರು ಅಭಿಪ್ರಾಯಪಟ್ಟರು.

ನಿಂದಿಸುವ ಮತ್ತು ಅಶಿಸ್ತಿನಿಂದ ವರ್ತಿಸುವ ತನ್ನ ಗಂಡನನ್ನು ಮನೆ ತೊರೆಯುವಂತೆ ಆದೇಶಿಸಲು ನಿರಾಕರಿಸಿದ್ದ ಜಿಲ್ಲಾ ನ್ಯಾಯಾಲಯವೊಂದರ ಆದೇಶವನ್ನು ವೃತ್ತಿಯಲ್ಲಿ ವಕೀಲರಾಗಿರುವ ಮಹಿಳೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತನ್ನ ಮತ್ತು ತನ್ನ ಕೆಲಸದ ಬಗ್ಗೆ ಗಂಡನ ವರ್ತನೆ ಉತ್ತಮವಾಗಿಲ್ಲ. ಆತ ಆಗಾಗ್ಗೆ ತನ್ನನ್ನು ನಿಂದಿಸುತ್ತಾನೆ ಮತ್ತು ಮನೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುತ್ತಾನೆ ಎಂದು ಆಕೆ ದೂರು ನೀಡಿದ್ದರು.

andolana

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago