ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಮನೆಯಲ್ಲಿ ಪತಿ ಇರುವುದನ್ನು ಕಂಡು ಹೆದರುವ ಮಹಿಳೆಯರ ಬಗ್ಗೆ ನ್ಯಾಯಾಲಯಗಳು ಅಸಡ್ಡೆ ತೋರಬಾರದು ಎಂದು ನ್ಯಾಯಮೂರ್ತಿ ಆರ್ ಎನ್ ಮಂಜುಳಾ ತಿಳಿಸಿದರು.
“ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರ ಮನೆಯಲ್ಲಿ ಶಾಂತಿ ನೆಲೆಸುತ್ತದೆ ಎನ್ನುವುದೇ ಏಕೈಕ ಮಾರ್ಗವಾಗಿದ್ದರೆ ಪ್ರತಿವಾದಿ ತನ್ನದೇ ಆದ ಇತರ ವಸತಿ ಸೌಕರ್ಯ ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನೂ ಪರಿಗಣಿಸದೆ ನ್ಯಾಯಾಲಯಗಳು ಆದೇಶ ನೀಡಬೇಕು. ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಇದ್ದರೆ ಒಳ್ಳೆಯದು. ಆದರೆ ಅದು ಇಲ್ಲದಿದ್ದರೆ ಅಂತಹ ವಸತಿ ವ್ಯವಸ್ಥೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು” ಎಂದು ನ್ಯಾಯಾಲಯ ಹೇಳಿತು.
ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಆದೇಶಗಳು ಪ್ರಾಯೋಗಿಕ ಮತ್ತು ಕಾರ್ಯಸಾಧುವಾಗಿರಬೇಕು. ಮಹಿಳೆ ತನ್ನ ಮನೆಯೊಳಗೆ ಸುರಕ್ಷಿತವಾಗಿದ್ದಾಳೆ ಎಂಬದನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯವಾಗಿ ಇಂತಹ ರಕ್ಷಣಾ ಆದೇಶಗಳನ್ನು ರವಾನಿಸಲಾಗುತ್ತದೆ. ಮಹಿಳೆ ಗಂಡನ ಇರುವಿಕೆಯಿಂದ ಹೆದರಿ ಚೀರುವಂತಹ ಸನ್ನಿವೇಶವಿದ್ದರೆ ನ್ಯಾಯಾಲಯಗಳು ಹೆಂಡತಿಗೆ ಕಿರುಕುಳ ಕೊಡದಂತೆ ಆತನಿಗೆ ಹೇಳಿದರಷ್ಟೇ ಸಾಲದು. ಬದಲಿಗೆ, ಆತ ಮನೆಯಲ್ಲಿರಲು ಅವಕಾಶ ನೀಡಬಾರದು ಎಂದು ನ್ಯಾಯಮೂರ್ತಿಯವರು ಅಭಿಪ್ರಾಯಪಟ್ಟರು.
ನಿಂದಿಸುವ ಮತ್ತು ಅಶಿಸ್ತಿನಿಂದ ವರ್ತಿಸುವ ತನ್ನ ಗಂಡನನ್ನು ಮನೆ ತೊರೆಯುವಂತೆ ಆದೇಶಿಸಲು ನಿರಾಕರಿಸಿದ್ದ ಜಿಲ್ಲಾ ನ್ಯಾಯಾಲಯವೊಂದರ ಆದೇಶವನ್ನು ವೃತ್ತಿಯಲ್ಲಿ ವಕೀಲರಾಗಿರುವ ಮಹಿಳೆ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ತನ್ನ ಮತ್ತು ತನ್ನ ಕೆಲಸದ ಬಗ್ಗೆ ಗಂಡನ ವರ್ತನೆ ಉತ್ತಮವಾಗಿಲ್ಲ. ಆತ ಆಗಾಗ್ಗೆ ತನ್ನನ್ನು ನಿಂದಿಸುತ್ತಾನೆ ಮತ್ತು ಮನೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುತ್ತಾನೆ ಎಂದು ಆಕೆ ದೂರು ನೀಡಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…