ದೇಶ- ವಿದೇಶ

ಮನೆಯ ಶಾಂತಿ ಕಾಪಾಡಲು ಪತಿ ಹೊರಹೋಗುವುದೇ ಏಕೈಕ ಮಾರ್ಗವಾದರೆ ಅದನ್ನೇ ಸೂಚಿಸಬೇಕು: ಮದ್ರಾಸ್ ಹೈಕೋರ್ಟ್

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ.

ಮನೆಯಲ್ಲಿ ಪತಿ ಇರುವುದನ್ನು ಕಂಡು ಹೆದರುವ ಮಹಿಳೆಯರ ಬಗ್ಗೆ ನ್ಯಾಯಾಲಯಗಳು ಅಸಡ್ಡೆ ತೋರಬಾರದು ಎಂದು ನ್ಯಾಯಮೂರ್ತಿ ಆರ್ ಎನ್ ಮಂಜುಳಾ ತಿಳಿಸಿದರು.

“ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರ ಮನೆಯಲ್ಲಿ ಶಾಂತಿ ನೆಲೆಸುತ್ತದೆ ಎನ್ನುವುದೇ ಏಕೈಕ ಮಾರ್ಗವಾಗಿದ್ದರೆ ಪ್ರತಿವಾದಿ ತನ್ನದೇ ಆದ ಇತರ ವಸತಿ ಸೌಕರ್ಯ ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನೂ ಪರಿಗಣಿಸದೆ ನ್ಯಾಯಾಲಯಗಳು ಆದೇಶ ನೀಡಬೇಕು. ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಇದ್ದರೆ ಒಳ್ಳೆಯದು. ಆದರೆ ಅದು ಇಲ್ಲದಿದ್ದರೆ ಅಂತಹ ವಸತಿ ವ್ಯವಸ್ಥೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು” ಎಂದು ನ್ಯಾಯಾಲಯ ಹೇಳಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಆದೇಶಗಳು ಪ್ರಾಯೋಗಿಕ ಮತ್ತು ಕಾರ್ಯಸಾಧುವಾಗಿರಬೇಕು. ಮಹಿಳೆ ತನ್ನ ಮನೆಯೊಳಗೆ ಸುರಕ್ಷಿತವಾಗಿದ್ದಾಳೆ ಎಂಬದನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯವಾಗಿ ಇಂತಹ ರಕ್ಷಣಾ ಆದೇಶಗಳನ್ನು ರವಾನಿಸಲಾಗುತ್ತದೆ. ಮಹಿಳೆ ಗಂಡನ ಇರುವಿಕೆಯಿಂದ ಹೆದರಿ ಚೀರುವಂತಹ ಸನ್ನಿವೇಶವಿದ್ದರೆ ನ್ಯಾಯಾಲಯಗಳು ಹೆಂಡತಿಗೆ ಕಿರುಕುಳ ಕೊಡದಂತೆ ಆತನಿಗೆ ಹೇಳಿದರಷ್ಟೇ ಸಾಲದು. ಬದಲಿಗೆ, ಆತ ಮನೆಯಲ್ಲಿರಲು ಅವಕಾಶ ನೀಡಬಾರದು ಎಂದು ನ್ಯಾಯಮೂರ್ತಿಯವರು ಅಭಿಪ್ರಾಯಪಟ್ಟರು.

ನಿಂದಿಸುವ ಮತ್ತು ಅಶಿಸ್ತಿನಿಂದ ವರ್ತಿಸುವ ತನ್ನ ಗಂಡನನ್ನು ಮನೆ ತೊರೆಯುವಂತೆ ಆದೇಶಿಸಲು ನಿರಾಕರಿಸಿದ್ದ ಜಿಲ್ಲಾ ನ್ಯಾಯಾಲಯವೊಂದರ ಆದೇಶವನ್ನು ವೃತ್ತಿಯಲ್ಲಿ ವಕೀಲರಾಗಿರುವ ಮಹಿಳೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತನ್ನ ಮತ್ತು ತನ್ನ ಕೆಲಸದ ಬಗ್ಗೆ ಗಂಡನ ವರ್ತನೆ ಉತ್ತಮವಾಗಿಲ್ಲ. ಆತ ಆಗಾಗ್ಗೆ ತನ್ನನ್ನು ನಿಂದಿಸುತ್ತಾನೆ ಮತ್ತು ಮನೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುತ್ತಾನೆ ಎಂದು ಆಕೆ ದೂರು ನೀಡಿದ್ದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago