ತಿರುವಂತನಪುರಂ: ಕೇರಳ ರಾಜ್ಯಕ್ಕೆ ಅನುದಾನ ಬೇಕಿದ್ದರೆ ಹಿಂದುಳಿದ ರಾಜ್ಯವೆಂದು ಘೋಷಿಸಲಿ ಎಂದು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಹೇಳಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಕೇರಳ ರಾಜ್ಯವನ್ನು ಕಡೆಗಣಿಸಿದೆ ಎಂದು ರಾಜ್ಯದ ಮುಖ್ಯಮಂತ್ರಿ ಆರೋಪಿಸಿದ್ದರು.
ಕೇರಳ ರಾಜ್ಯದ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುರಿಯನ್, ಕೇರಳ ರಾಜ್ಯವು ಕೇಂದ್ರದಿಂದ ಹೆಚ್ಚು ಅನುದಾನ ಪಡೆಯಬೇಕು ಅಂದರೆ ಹಿಂದುಳಿದ ರಾಜ್ಯವೆಂದು ಘೋಷಿಸಲಿ. ಜೊತೆಗೆ ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ ಎಂದು ತೋರಿಸಿಕೊಳ್ಳಲಿ. ರಸ್ತೆ ಸರಿಯಿಲ್ಲ, ಉತ್ತಮ ಶಿಕ್ಷಣವಿಲ್ಲ, ಮೂಲ ಸೌಕರ್ಯಗಳಿಲ್ಲ ಎಂದು ನೀವು ಘೋಷಿಸಿ. ಆನಂತರ ಕೇಂದ್ರದಿಂದ ನಿಮಗೆ ಹೆಚ್ಚಿನ ಅನುದಾನ ಸಿಗಲಿದೆ ಎಂದು ಹೇಳಿದ್ದಾರೆ.
ಸಚಿವರ ಈ ಹೇಳಿಕೆ ತೀವ್ರ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಸಚಿವರ ಈ ಹೇಳಿಕೆಯು ಕೇರಳ ವಿರೋಧಿ ನಿಲುವನ್ನು ತೋರಿಸುತ್ತದೆ ಎಂದು ರಾಜ್ಯದ ಆಡಳಿತ ಪಕ್ಷದ ನಾಯಕರು ಕಿಡಿಕಾರಿದ್ದಾರೆ.
ಕಳೆದ ಜುಲೈನಲ್ಲಿ ವಯನಾಡ್ ಭೂಕುಸಿತಕ್ಕೆ ಸಂಬಂಧಿಸಿದಂತೆ ಅನುದಾನ ಹಾಗೂ 24,000ರೂ.ಗಳ ವಿಶೇಷ ಪ್ಯಾಕೆಜ್ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ ಕೇಂದ್ರ ಬಜೆಟ್ ಮಂಡನೆಯ ನಂತರ ಕೇರಳ ಸಿಎಂ ಪಿಣರಾಯಿ ವಿಜಯನ್ ಇದು ನಿರಾಶಾದಾಯಕ ಬಜೆಟ್ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…