ದೇಶ- ವಿದೇಶ

ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ, 2014ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದು, ಈ ಆದೇಶ ಕೂಡಲೇ ಜಾರಿಗೆ ಬರುವಂತೆ ನೇಮಕಾತಿ ಆದೇಶವನ್ನು ಅನುಮೋದಿಸಿದೆ.

ನಿಧಿ ತಿವಾರಿ ಹಿನ್ನೆಲೆ ಏನು?

ನಿಧಿ ತಿವಾರಿ ಮೂಲತಃ ವಾರಣಾಸಿಯ ಮೆಹಮುರ್ಗಂಜ್‌ ಮೂಲದವರಾಗಿದ್ದಾರೆ. ಇವರು ತಿವಾರಿ 2013ರ ನಾಗರೀಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್‌ಗಳಿಸಿದ್ದರು. 2016ರಲ್ಲಿ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಇಮಲ್‌ ಸನ್ಯಾಲ್‌ ಸ್ಮಾರಕ ಪದಕವನ್ನು ನೀಡಲಾಗಿತ್ತು. ಅಲ್ಲದೇ ತಿವಾರಿ ಅವರನ್ನು 2023ರ ಜನವರಿ 6 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈ ನೇಮಕದ ಮೇರೆಗೆ ಅವರು ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಳಿಕ ನಿಧಿ ತಿವಾರಿ ಅವರನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago