ದೇಶ- ವಿದೇಶ

ಚೀನಾ ಉಕ್ಕಿನ ಮೇಲೆ ಆಮದು ಸುಂಕ: ಹಣಕಾಸು ಸಚಿವರ ಜತೆ ಚರ್ಚಿಸಿ ನಿರ್ಧಾರ ಎಂದ ಸಚಿವ ಎಚ್.ಡಿ.ಕುಮಾರಸ್ವಾಮಿ

ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಸಚಿವರು

ವೈಜಾಗ್ ಸ್ಟೀಲ್ ಉಳಿಸಲು ಸರ್ವ ಪ್ರಯತ್ನ ಮಾಡುತ್ತೇವೆ

 

ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟ (IPAFA) ಹಮ್ಮಿಕೊಂಡಿದ್ದ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಚೀನಾದಿಂದ ಅನಿಯಂತ್ರಿತವಾಗಿ ಆಮದಾಗುತ್ತಿರುವ ಉಕ್ಕಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು.

ಚೀನಾದ ಉಕ್ಕಿನ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುವ ಬಗ್ಗೆ ಆದಷ್ಟು ಬೇಗ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಅವರು, ಯಾವುದೇ ಕಾರಣಕ್ಕೂ ದೇಶೀಯ ಉಕ್ಕು ಕ್ಷೇತ್ರವನ್ನು ಅಪಾಯಕ್ಕೆ ಸಿಲುಕಲು ಬಿಡುವುದಿಲ್ಲ ಎಂದು ಹೇಳಿದರು.

ಉಕ್ಕಿನ ಕ್ಷೇತ್ರದ ಜತೆಗೆ ದೇಶೀಯ ದೇಶೀಯ ಮಿಶ್ರಲೋಹ ಉದ್ಯಮವನ್ನು ರಕ್ಷಿಸಬೇಕಾದ ಹೊಣೆ ನಮ್ಮ ಮೇಲಿದೆ. ಸವಾಲುಗಳಿಂದ ಉದ್ಯಮಕ್ಕೆ ರಕ್ಷಣೆ ಕೊಡಬೇಕಿದೆ. ಈ ನಿಟ್ಟಿನಲ್ಲಿ ಉಕ್ಕಿನ ಮೇಲೆ ಕನಿಷ್ಠ ಪ್ರಮಾಣದ ಆಮದು ಸುಂಕ ವಿಧಿಸುವ ಬಗ್ಗೆ ಹಣಕಾಸು ಸಚಿವರ ಜತೆ ಸಮಾಲೋಚನೆ ನಡೆಸಲಾಗುವುದು. ಈ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ನಡೆಯುತ್ತಿವೆ. ವಿತ್ತ ಸಚಿವರನ್ನು ಒಪ್ಪಿಸುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.

ಉಕ್ಕು ಕ್ಷೇತ್ರದ ದೇಶದ ಆರ್ಥಿಕತೆಯ ಬೆನ್ನೆಲುಬು. ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿಯೇ ಮಾಡುತ್ತೇವೆ. ಈ ನಿಟ್ಟಿನಲ್ಲಿ ಸಚಿವಾಲಯದಲ್ಲಿ ನಿರಂತರ ಚರ್ಚೆಗಳು ನಡೆದಿವೆ ಎಂದರು ಸಚಿವರು.

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ -RNIL (ವೈಜಾಗ್ ಸ್ಟೀಲ್) ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆಯಲ್ಲ? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಈ ವಿಷಯ ನನ್ನ ಗಮನಕ್ಕೂ ಬಂದಿದೆ. ನಮ್ಮ ಮುಂದೆ ಸವಾಲುಗಳು ಇವೆ. ಆ ಕಾರ್ಖಾನೆಯನ್ನು ಸುಸ್ಥಿತಿಗೆ ತಂದು ಉಳಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದಕ್ಕೂ ಮೊದಲು ಸಮ್ಮೇಳನದಲ್ಲಿ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಿದ ಸಚಿವರು; ಪ್ರಧಾನಮಂತ್ರಿಗಳು ಉಕ್ಕು ಉದ್ಯಮವನ್ನು ಸಶಕ್ತಿಗೊಳಿಸಿ, ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನಿಗದಿ ಮಾಡಿದ್ದಾರೆ. ಅವರ ಕನಸು ನನಸು ಮಾಡಲು ನಾವು ಅವಿರತವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಭಾರತೀಯ ಮ್ಯಾಂಗನೀಸ್ ಅದಿರುವ ಸಂಸ್ಥೆ (MOIL) ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಜಿತ್ ಕುಮಾರ್ ಸಕ್ಸೇನಾ ಹಾಗೂ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟದ ಅಧ್ಯಕ್ಷ ಮನೀಶ್ ಸರಡಾ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

13 mins ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

22 mins ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

1 hour ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 hours ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago