ದೇಶ- ವಿದೇಶ

ಚೀನಾ ಉಕ್ಕಿನ ಮೇಲೆ ಆಮದು ಸುಂಕ: ಹಣಕಾಸು ಸಚಿವರ ಜತೆ ಚರ್ಚಿಸಿ ನಿರ್ಧಾರ ಎಂದ ಸಚಿವ ಎಚ್.ಡಿ.ಕುಮಾರಸ್ವಾಮಿ

ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಸಚಿವರು

ವೈಜಾಗ್ ಸ್ಟೀಲ್ ಉಳಿಸಲು ಸರ್ವ ಪ್ರಯತ್ನ ಮಾಡುತ್ತೇವೆ

 

ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟ (IPAFA) ಹಮ್ಮಿಕೊಂಡಿದ್ದ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಚೀನಾದಿಂದ ಅನಿಯಂತ್ರಿತವಾಗಿ ಆಮದಾಗುತ್ತಿರುವ ಉಕ್ಕಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು.

ಚೀನಾದ ಉಕ್ಕಿನ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುವ ಬಗ್ಗೆ ಆದಷ್ಟು ಬೇಗ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಅವರು, ಯಾವುದೇ ಕಾರಣಕ್ಕೂ ದೇಶೀಯ ಉಕ್ಕು ಕ್ಷೇತ್ರವನ್ನು ಅಪಾಯಕ್ಕೆ ಸಿಲುಕಲು ಬಿಡುವುದಿಲ್ಲ ಎಂದು ಹೇಳಿದರು.

ಉಕ್ಕಿನ ಕ್ಷೇತ್ರದ ಜತೆಗೆ ದೇಶೀಯ ದೇಶೀಯ ಮಿಶ್ರಲೋಹ ಉದ್ಯಮವನ್ನು ರಕ್ಷಿಸಬೇಕಾದ ಹೊಣೆ ನಮ್ಮ ಮೇಲಿದೆ. ಸವಾಲುಗಳಿಂದ ಉದ್ಯಮಕ್ಕೆ ರಕ್ಷಣೆ ಕೊಡಬೇಕಿದೆ. ಈ ನಿಟ್ಟಿನಲ್ಲಿ ಉಕ್ಕಿನ ಮೇಲೆ ಕನಿಷ್ಠ ಪ್ರಮಾಣದ ಆಮದು ಸುಂಕ ವಿಧಿಸುವ ಬಗ್ಗೆ ಹಣಕಾಸು ಸಚಿವರ ಜತೆ ಸಮಾಲೋಚನೆ ನಡೆಸಲಾಗುವುದು. ಈ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ನಡೆಯುತ್ತಿವೆ. ವಿತ್ತ ಸಚಿವರನ್ನು ಒಪ್ಪಿಸುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.

ಉಕ್ಕು ಕ್ಷೇತ್ರದ ದೇಶದ ಆರ್ಥಿಕತೆಯ ಬೆನ್ನೆಲುಬು. ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿಯೇ ಮಾಡುತ್ತೇವೆ. ಈ ನಿಟ್ಟಿನಲ್ಲಿ ಸಚಿವಾಲಯದಲ್ಲಿ ನಿರಂತರ ಚರ್ಚೆಗಳು ನಡೆದಿವೆ ಎಂದರು ಸಚಿವರು.

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ -RNIL (ವೈಜಾಗ್ ಸ್ಟೀಲ್) ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆಯಲ್ಲ? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಈ ವಿಷಯ ನನ್ನ ಗಮನಕ್ಕೂ ಬಂದಿದೆ. ನಮ್ಮ ಮುಂದೆ ಸವಾಲುಗಳು ಇವೆ. ಆ ಕಾರ್ಖಾನೆಯನ್ನು ಸುಸ್ಥಿತಿಗೆ ತಂದು ಉಳಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದಕ್ಕೂ ಮೊದಲು ಸಮ್ಮೇಳನದಲ್ಲಿ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಿದ ಸಚಿವರು; ಪ್ರಧಾನಮಂತ್ರಿಗಳು ಉಕ್ಕು ಉದ್ಯಮವನ್ನು ಸಶಕ್ತಿಗೊಳಿಸಿ, ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನಿಗದಿ ಮಾಡಿದ್ದಾರೆ. ಅವರ ಕನಸು ನನಸು ಮಾಡಲು ನಾವು ಅವಿರತವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಭಾರತೀಯ ಮ್ಯಾಂಗನೀಸ್ ಅದಿರುವ ಸಂಸ್ಥೆ (MOIL) ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಜಿತ್ ಕುಮಾರ್ ಸಕ್ಸೇನಾ ಹಾಗೂ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟದ ಅಧ್ಯಕ್ಷ ಮನೀಶ್ ಸರಡಾ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

23 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

34 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

41 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

50 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago