ದೇಶ- ವಿದೇಶ

ಚೀನಾ ಉಕ್ಕಿನ ಮೇಲೆ ಆಮದು ಸುಂಕ: ಹಣಕಾಸು ಸಚಿವರ ಜತೆ ಚರ್ಚಿಸಿ ನಿರ್ಧಾರ ಎಂದ ಸಚಿವ ಎಚ್.ಡಿ.ಕುಮಾರಸ್ವಾಮಿ

ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಸಚಿವರು

ವೈಜಾಗ್ ಸ್ಟೀಲ್ ಉಳಿಸಲು ಸರ್ವ ಪ್ರಯತ್ನ ಮಾಡುತ್ತೇವೆ

 

ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟ (IPAFA) ಹಮ್ಮಿಕೊಂಡಿದ್ದ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಚೀನಾದಿಂದ ಅನಿಯಂತ್ರಿತವಾಗಿ ಆಮದಾಗುತ್ತಿರುವ ಉಕ್ಕಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು.

ಚೀನಾದ ಉಕ್ಕಿನ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುವ ಬಗ್ಗೆ ಆದಷ್ಟು ಬೇಗ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಅವರು, ಯಾವುದೇ ಕಾರಣಕ್ಕೂ ದೇಶೀಯ ಉಕ್ಕು ಕ್ಷೇತ್ರವನ್ನು ಅಪಾಯಕ್ಕೆ ಸಿಲುಕಲು ಬಿಡುವುದಿಲ್ಲ ಎಂದು ಹೇಳಿದರು.

ಉಕ್ಕಿನ ಕ್ಷೇತ್ರದ ಜತೆಗೆ ದೇಶೀಯ ದೇಶೀಯ ಮಿಶ್ರಲೋಹ ಉದ್ಯಮವನ್ನು ರಕ್ಷಿಸಬೇಕಾದ ಹೊಣೆ ನಮ್ಮ ಮೇಲಿದೆ. ಸವಾಲುಗಳಿಂದ ಉದ್ಯಮಕ್ಕೆ ರಕ್ಷಣೆ ಕೊಡಬೇಕಿದೆ. ಈ ನಿಟ್ಟಿನಲ್ಲಿ ಉಕ್ಕಿನ ಮೇಲೆ ಕನಿಷ್ಠ ಪ್ರಮಾಣದ ಆಮದು ಸುಂಕ ವಿಧಿಸುವ ಬಗ್ಗೆ ಹಣಕಾಸು ಸಚಿವರ ಜತೆ ಸಮಾಲೋಚನೆ ನಡೆಸಲಾಗುವುದು. ಈ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ನಡೆಯುತ್ತಿವೆ. ವಿತ್ತ ಸಚಿವರನ್ನು ಒಪ್ಪಿಸುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.

ಉಕ್ಕು ಕ್ಷೇತ್ರದ ದೇಶದ ಆರ್ಥಿಕತೆಯ ಬೆನ್ನೆಲುಬು. ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿಯೇ ಮಾಡುತ್ತೇವೆ. ಈ ನಿಟ್ಟಿನಲ್ಲಿ ಸಚಿವಾಲಯದಲ್ಲಿ ನಿರಂತರ ಚರ್ಚೆಗಳು ನಡೆದಿವೆ ಎಂದರು ಸಚಿವರು.

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ -RNIL (ವೈಜಾಗ್ ಸ್ಟೀಲ್) ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆಯಲ್ಲ? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಈ ವಿಷಯ ನನ್ನ ಗಮನಕ್ಕೂ ಬಂದಿದೆ. ನಮ್ಮ ಮುಂದೆ ಸವಾಲುಗಳು ಇವೆ. ಆ ಕಾರ್ಖಾನೆಯನ್ನು ಸುಸ್ಥಿತಿಗೆ ತಂದು ಉಳಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದಕ್ಕೂ ಮೊದಲು ಸಮ್ಮೇಳನದಲ್ಲಿ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಿದ ಸಚಿವರು; ಪ್ರಧಾನಮಂತ್ರಿಗಳು ಉಕ್ಕು ಉದ್ಯಮವನ್ನು ಸಶಕ್ತಿಗೊಳಿಸಿ, ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನಿಗದಿ ಮಾಡಿದ್ದಾರೆ. ಅವರ ಕನಸು ನನಸು ಮಾಡಲು ನಾವು ಅವಿರತವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಭಾರತೀಯ ಮ್ಯಾಂಗನೀಸ್ ಅದಿರುವ ಸಂಸ್ಥೆ (MOIL) ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಜಿತ್ ಕುಮಾರ್ ಸಕ್ಸೇನಾ ಹಾಗೂ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟದ ಅಧ್ಯಕ್ಷ ಮನೀಶ್ ಸರಡಾ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago