Mysore
26
broken clouds

Social Media

ಗುರುವಾರ, 16 ಏಪ್ರಿಲ 2026
Light
Dark

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು.

ಈ ಪ್ರಸ್ತಾವನೆಯು ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಈಗಿರುವ 543 ರಿಂದ 850ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದ್ದು, ಸಂಸತ್ತಿನಲ್ಲಿ ಭಾರೀ ಸಂಚಲನ ಮೂಡಿಸಿದೆ.

ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿರುವ ನಾರಿ ಶಕ್ತಿ ವಂದನಾ ಅಧಿನಿಯಮದ ಅನುಷ್ಠಾನವನ್ನು ಈ ಮರುವಿಂಗಡಣೆ ಪ್ರಕ್ರಿಯೆಯೊಂದಿಗೆ ಜೋಡಿಸಲಾಗಿದ್ದು, 2029ರ ಸಾರ್ವತ್ರಿಕ ಚುನಾವಣೆಯ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಆದರೆ ಜನಸಂಖ್ಯೆ ಆಧಾರಿತ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರಾತಿನಿಧ್ಯದ ಅನ್ಯಾಯವಾಗಬಹುದು ಎಂಬ ಆತಂಕವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿದ್ದು, ಸದನದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ.

ಈ ಬಗ್ಗೆ ಮಾತನಾಡಿರುವ ಸಚಿವರು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣ ಯಶಸ್ವಿಯಾಗಿರುವುದರಿಂದ, ಕ್ಷೇತ್ರ ಮರುವಿಂಗಡಣೆಯಿಂದ ಆ ರಾಜ್ಯಗಳಿಗೆ ರಾಜಕೀಯವಾಗಿ ಯಾವುದೇ ಅನ್ಯಾಯವಾಗುವುದಿಲ್ಲ. ಸೀಟುಗಳ ಹೆಚ್ಚಳದ ವೇಳೆ ಎಲ್ಲಾ ರಾಜ್ಯಗಳಿಗೂ ಸಮಾನವಾಗಿ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

Tags:
error: Content is protected !!