ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು.
ಈ ಪ್ರಸ್ತಾವನೆಯು ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಈಗಿರುವ 543 ರಿಂದ 850ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದ್ದು, ಸಂಸತ್ತಿನಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿರುವ ನಾರಿ ಶಕ್ತಿ ವಂದನಾ ಅಧಿನಿಯಮದ ಅನುಷ್ಠಾನವನ್ನು ಈ ಮರುವಿಂಗಡಣೆ ಪ್ರಕ್ರಿಯೆಯೊಂದಿಗೆ ಜೋಡಿಸಲಾಗಿದ್ದು, 2029ರ ಸಾರ್ವತ್ರಿಕ ಚುನಾವಣೆಯ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಆದರೆ ಜನಸಂಖ್ಯೆ ಆಧಾರಿತ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರಾತಿನಿಧ್ಯದ ಅನ್ಯಾಯವಾಗಬಹುದು ಎಂಬ ಆತಂಕವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿದ್ದು, ಸದನದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ.
ಈ ಬಗ್ಗೆ ಮಾತನಾಡಿರುವ ಸಚಿವರು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣ ಯಶಸ್ವಿಯಾಗಿರುವುದರಿಂದ, ಕ್ಷೇತ್ರ ಮರುವಿಂಗಡಣೆಯಿಂದ ಆ ರಾಜ್ಯಗಳಿಗೆ ರಾಜಕೀಯವಾಗಿ ಯಾವುದೇ ಅನ್ಯಾಯವಾಗುವುದಿಲ್ಲ. ಸೀಟುಗಳ ಹೆಚ್ಚಳದ ವೇಳೆ ಎಲ್ಲಾ ರಾಜ್ಯಗಳಿಗೂ ಸಮಾನವಾಗಿ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…