ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್ ಕಿ ಬಾತ್ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ.
ಮನ್ ಕಿ ಬಾತ್ 126ನೇ ಸಂಚಿಕೆಯಲ್ಲಿ ಎಸ್.ಎಲ್.ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ನಾವೆಲ್ಲಾ ದೇಶ ಕಂಡ ಮಹಾನ್ ವಿಚಾರವಾಗಿ ಹಾಗೂ ಚಿಂತಕ ಎಸ್.ಎಲ್.ಭೈರಪ್ಪ ಅವರನ್ನು ಕಳೆದುಕೊಂಡಿದ್ದೇವೆ. ಅವರೊಂದಿಗೆ ವ್ಯಕ್ತಿಗತ ಸಂಪರ್ಕ ಹೊಂದಿದ್ದೆ. ಅನೇಕ ಸಂದರ್ಭಗಳಲ್ಲಿ ಹಲವು ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:-ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್, ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ
ಇನ್ನು ಭೈರಪ್ಪ ಅವರ ಅನೇಕ ಕೃತಿಗಳು ಹಲವಾರು ಭಾಷೆಗಳಿಗೆ ಅನುವಾದವಾಗಿದೆ. ನಮ್ಮ ಮೂಲ ಸಂಸ್ಕೃತಿಯ ಬಗ್ಗೆ ಹೆಮ್ಮೆ ಇರಬೇಕು. ಗೌರವ ತೋರಿಸಬೇಕು ಎಂಬುದನ್ನು ಅವರು ನಮಗೆ ಕಲಿಸಿ ಕೊಟ್ಟಿದ್ದಾರೆ. ಅವರ ಅಗಲಿಕೆಗೆ ಭಾವುಕ ವಿದಾಯ ಹೇಳುತ್ತೇನೆ. ಭೈರಪ್ಪ ಅವರೊಂದಿಗಿನ ಒಡನಾಟ ಪ್ರೇರಣದಾಯಕ. ಅವರ ಕೃತಿಗಳು ಯುವ ಜನತೆಗೆ ದಾರಿ ದೀಪವಾಗಿದೆ. ಅವರ ಕೃತಿಗಳನ್ನು ನಮ್ಮ ಯುವಕರು ಹೆಚ್ಚಾಗಿ ಓದಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…