ದೇಶ- ವಿದೇಶ

ದಿಲ್ಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ : ವರ್ಚುವಲ್‌ನಲ್ಲೇ ಸುಪ್ರೀಂ ಕಲಾಪ

ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ ಸಂದರ್ಭದಲ್ಲಿ ಅವರು ಅಸ್ವಸ್ಥರಾದಂತಾಗಿದ್ದನ್ನು ಹಂಚಿಕೊಂಡಿದ್ದಾರೆ.

೬೦ ವರ್ಷ ಮೇಲ್ಪಟ್ಟವರು ನ್ಯಾಯಾಲಯಕ್ಕೆ ಬಾರದೆ ವರ್ಚುವಲ್ ವೇದಿಕೆಯಲ್ಲೇ ಕಲಾಪದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ಕುರಿತು ವಕೀಲರ ಸಂಘದೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ನ್ಯಾ. ಸೂರ್ಯ ಕಾಂತ್ ತಿಳಿಸಿದ್ದಾರೆ.

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಇನ್ನಿತರ ರಾಜ್ಯಗಳಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ರಾಕೇಶ್ವ ದ್ವಿವೇದಿ, ‘ನನಗೆ ಉಸಿರಾಟದ ಸಮಸ್ಯೆ ಇದೆ. ಟಿಪ್ಪಣಿ ಬರೆಯಲು ನನ್ನ ಸಹೋದ್ಯೊಗಿಗಳಿಗೆ ಅವಕಾಶ ನೀಡಿ. ಮುಂದಿನ ವಿಚಾರಣೆಯಲ್ಲಿ ನಾನು ವಿಡಿಯೊ ಕಾನ್ಛರೆನ್ಸ್ ಮೂಲಕ ಪಾಲ್ಗೊಳ್ಳ ಬಯಸುತ್ತೇನೆ. ಅವಕಾಶ ಮಾಡಿಕೊಡಿ’ ಎಂದು ಪೀಠವನ್ನು ಕೋರಿದರು.

ಇದಕ್ಕೆ ದನಿಗೂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ನಮ್ಮ ಈ ವಯಸ್ಸಿನಲ್ಲಿ ದೆಹಲಿಯ ಕಳಪೆ ಗುಣಮಟ್ಟದ ಗಾಳಿಯನ್ನು ಸೇವಿಸುತ್ತಿದ್ದೇವೆ’ ಎಂದು ಕಳವಳ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಸೂರ್ಯ ಕಾಂತ್, ‘ನಿನ್ನೆ ಒಂದು ಗಂಟೆಗಳ ಕಾಲ ನಡೆದಾಡಿದೆ. ಅಸ್ವಸ್ಥತೆ ಎಂದು ನನಗೂ ಅನಿಸಿತು. ೬೦ ವರ್ಷ ಮೀರಿದ ವಕೀಲರು ಖುದ್ದು ಹಾಜರಾಗಿ ವಾದ ಮಂಡಿಸುವುದಕ್ಕೆ ವಿನಾಯಿತಿ ನೀಡುವ ಸಾಧ್ಯತೆ ಕುರಿತು ಚಿಂತಿಸಲಾಗುವುದು. ನಾವು ಏನೇ ನಿರ್ಧಾರ ತೆಗೆದುಕೊಂಡರೂ, ಮೊದಲು ವಕೀಲರ ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಅವರಿಂದ ಪ್ರಸ್ತಾವನೆ ಬಂದರೆ, ನಿರ್ಧಾರ ತೆಗೆದುಕೊಳ್ಳುವುದು ಸುಲಭ’ ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸದ್ಯ ಹೈಬ್ರಿಡ್ ಮಾದರಿಯಲ್ಲಿ ನ್ಯಾಯಾಲಯದ ಕಲಾಪಗಳು ನಡೆಯುತ್ತಿವೆ. ಇದರಲ್ಲಿ ಖುದ್ದು ಹಾಜರಿ ಮತ್ತು ವರ್ಚುವಲ್ ಮಾದರಿಯಲ್ಲಿ ಭಾಗವಹಿಸಲು ಅವಕಾಶವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago