ದೇಶ- ವಿದೇಶ

ದಿಲ್ಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ : ವರ್ಚುವಲ್‌ನಲ್ಲೇ ಸುಪ್ರೀಂ ಕಲಾಪ

ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ ಸಂದರ್ಭದಲ್ಲಿ ಅವರು ಅಸ್ವಸ್ಥರಾದಂತಾಗಿದ್ದನ್ನು ಹಂಚಿಕೊಂಡಿದ್ದಾರೆ.

೬೦ ವರ್ಷ ಮೇಲ್ಪಟ್ಟವರು ನ್ಯಾಯಾಲಯಕ್ಕೆ ಬಾರದೆ ವರ್ಚುವಲ್ ವೇದಿಕೆಯಲ್ಲೇ ಕಲಾಪದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ಕುರಿತು ವಕೀಲರ ಸಂಘದೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ನ್ಯಾ. ಸೂರ್ಯ ಕಾಂತ್ ತಿಳಿಸಿದ್ದಾರೆ.

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಇನ್ನಿತರ ರಾಜ್ಯಗಳಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ರಾಕೇಶ್ವ ದ್ವಿವೇದಿ, ‘ನನಗೆ ಉಸಿರಾಟದ ಸಮಸ್ಯೆ ಇದೆ. ಟಿಪ್ಪಣಿ ಬರೆಯಲು ನನ್ನ ಸಹೋದ್ಯೊಗಿಗಳಿಗೆ ಅವಕಾಶ ನೀಡಿ. ಮುಂದಿನ ವಿಚಾರಣೆಯಲ್ಲಿ ನಾನು ವಿಡಿಯೊ ಕಾನ್ಛರೆನ್ಸ್ ಮೂಲಕ ಪಾಲ್ಗೊಳ್ಳ ಬಯಸುತ್ತೇನೆ. ಅವಕಾಶ ಮಾಡಿಕೊಡಿ’ ಎಂದು ಪೀಠವನ್ನು ಕೋರಿದರು.

ಇದಕ್ಕೆ ದನಿಗೂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ನಮ್ಮ ಈ ವಯಸ್ಸಿನಲ್ಲಿ ದೆಹಲಿಯ ಕಳಪೆ ಗುಣಮಟ್ಟದ ಗಾಳಿಯನ್ನು ಸೇವಿಸುತ್ತಿದ್ದೇವೆ’ ಎಂದು ಕಳವಳ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಸೂರ್ಯ ಕಾಂತ್, ‘ನಿನ್ನೆ ಒಂದು ಗಂಟೆಗಳ ಕಾಲ ನಡೆದಾಡಿದೆ. ಅಸ್ವಸ್ಥತೆ ಎಂದು ನನಗೂ ಅನಿಸಿತು. ೬೦ ವರ್ಷ ಮೀರಿದ ವಕೀಲರು ಖುದ್ದು ಹಾಜರಾಗಿ ವಾದ ಮಂಡಿಸುವುದಕ್ಕೆ ವಿನಾಯಿತಿ ನೀಡುವ ಸಾಧ್ಯತೆ ಕುರಿತು ಚಿಂತಿಸಲಾಗುವುದು. ನಾವು ಏನೇ ನಿರ್ಧಾರ ತೆಗೆದುಕೊಂಡರೂ, ಮೊದಲು ವಕೀಲರ ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಅವರಿಂದ ಪ್ರಸ್ತಾವನೆ ಬಂದರೆ, ನಿರ್ಧಾರ ತೆಗೆದುಕೊಳ್ಳುವುದು ಸುಲಭ’ ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸದ್ಯ ಹೈಬ್ರಿಡ್ ಮಾದರಿಯಲ್ಲಿ ನ್ಯಾಯಾಲಯದ ಕಲಾಪಗಳು ನಡೆಯುತ್ತಿವೆ. ಇದರಲ್ಲಿ ಖುದ್ದು ಹಾಜರಿ ಮತ್ತು ವರ್ಚುವಲ್ ಮಾದರಿಯಲ್ಲಿ ಭಾಗವಹಿಸಲು ಅವಕಾಶವಿದೆ.

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago