ದೇಶ- ವಿದೇಶ

ದಿಲ್ಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ

ಹೊಸದಿಲ್ಲಿ : ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ.

ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ ಎಕ್ಯೂಐ ೪೦೦ರ ಗಡಿ ದಾಟಿದೆ. ಮುಂದಿನ ಒಂದು ವಾರದಲ್ಲಿ ಈ ಪ್ರಮಾಣ ೬೦೦ ಗಡಿ ದಾಟಬಹುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

ಇದನ್ನು ಓದಿ: ಸಿಎಂ ಕಾರ್ಯಕ್ರಮದಲ್ಲಿ ನೂಕು ನುಗ್ಗಲು : 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದೆಹಲಿಯ ೩೮ ಮೇಲ್ವಿಚಾರಣಾ ಕೇಂದ್ರಗಳ ಪೈಕಿ ೨೪ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ತುಂಬಾ ಕಳಪೆ ಮಟ್ಟವನ್ನು ದಾಖಲಿಸಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಇಂದು ಬೆಳಗ್ಗೆ, ಆನಂದ್ ವಿಹಾರ್ ನಗರದಲ್ಲಿ ಅತ್ಯಂತ ವಿಷಕಾರಿ ಗಾಳಿಯನ್ನು ವರದಿ ಮಾಡಿದೆ, ಎಕ್ಯೂಐ ೪೧೭ ರೊಂದಿಗೆ, ಇದು ತೀವ್ರ ಕಳಪೆ ವರ್ಗಕ್ಕೆ ಇಳಿದಿದೆ. ವಜೀರ‍್ಪುರ (೩೬೪), ವಿವೇಕ್ ವಿಹಾರ್ (೩೫೧), ದ್ವಾರಕಾ (೩೩೫), ಮತ್ತು ಆರ‍್ಕೆ ಪುರಂ (೩೨೩) ಸೇರಿದಂತೆ ೧೨ ನಿಲ್ದಾಣಗಳು ಗಾಳಿಯ ಗುಣಮಟ್ಟವನ್ನು ತುಂಬಾ ಕಳಪೆ ವ್ಯಾಪ್ತಿಯಲ್ಲಿ ವರದಿ ಮಾಡಿವೆ. ಸಿಪಿಸಿಬಿ ದತ್ತಾಂಶದ ಪ್ರಕಾರ, ಸಿರಿ ಫೋರ್ಟ್, ದಿಲ್ಶಾದ್ ಗಾರ್ಡನ್ ಮತ್ತು ಜಹಾಂಗೀರ‍್ಪುರಿ ಮುಂತಾದ ಇತರ ಪ್ರದೇಶಗಳು ೩೧೮ ಎಕ್ಯೂಐ ದಾಖಲಿಸಿವೆ. ಪಂಜಾಬಿ ಬಾಗ್ ೩೧೩, ನೆಹರು ನಗರ ೩೧೦, ಅಶೋಕ್ ವಿಹಾರ್ ೩೦೫ ಮತ್ತು ಬವಾನಾ ೩೦೪ರ ವಾಯು ಗುಣಮಟ್ಟ ಸೂಚ್ಯಂಕವನ್ನು ದಾಖಲಿಸಿವೆ.

ದಿಲ್ಲಿಯಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಿಲ್ಲಿ-ಎನ್‌ಸಿಆರ್ ಪ್ರದೇಶದಲ್ಲಿ ಗ್ರೇಡೆಡ್ ರೆಸ್ಪಾನ್ಸ್‌ನ ಆಕ್ಷನ್ ಪ್ಲಾನ್ ರಚಿಸಲಾಗಿದೆ. ಆಕ್ಷನ್ ಕ್ವಾಲಿಟಿ ಇಂಡೆಕ್ಸ್ ೩೦೧ ರಿಂದ ೪೦೦ರವರೆಗಿನ ಅತ್ಯಂತ ಕಳಪೆ ವರ್ಗಕ್ಕೆ ಸೇರಿದಾಗ ಇದನ್ನು ಜಾರಿಗೊಳಿಸಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago