ನವದೆಹಲಿ: ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ ಹೆಚ್ಚಾಗಿದೆ.
ವೈದ್ಯರ ಪ್ರಕಾರ ಈ ವೈರಸ್ ಸೊಳ್ಳೆ ಕಡಿತದಿಂದ ಹರಡುತ್ತದೆ ಮತ್ತು ಮಳೆಗಾಲದಲ್ಲಿ ಇದರ ಅಪಾಯ ಹೆಚ್ಚು. ಝೀಕಾ ವೈರಸ್ ಸೋಂಕು ಗರ್ಭಿಣಿಯರಿಗೆ ಹೆಚ್ಚು ಹಾನಿಯನ್ನುಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ಜನರು ಈ ವೈರಸ್ನ್ನು ತಪ್ಪಿಸಲು ಪ್ರಯತ್ನಿಸಬೇಕು ಮತ್ತು ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಬೇಕು.
ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಮಳೆಯಲ್ಲಿ ಅಪಾಯದ ಪ್ರಮಾಣವು ಹೆಚ್ಚಾಗುತ್ತದೆ. ಡೆಂಗ್ಯೂ ಮತ್ತು ಚಿಕನ್ಗುನ್ಯಾದಂತೆ ಝೀಕಾ ವೈರಸ್ ಕೂಡಾ ಒಂದು ಸೋಂಕು. ಇದರ ಸೋಂಕಿಗೆ ಒಳಗಾದಾಗ ಜನರು ಜ್ವರ, ತಲೆನೋವು, ಕೀಲುನೋವು, ಸ್ನಾಯುನೋವು, ಕೆಂಪು ಕಣ್ಣುಗಳು ಮತ್ತು ಚರ್ಮದ ದದ್ದುಗಳಂತಹ ರೋಗಲಕ್ಷಣಗಳು ಕಂಡು ಬರುತ್ತವೆ.
ಆದ್ದರಿಂದ ಎಲ್ಲರೂ ಕೂಡ ತಪಾಸಣೆ ಮಾಡಿಸಿಕೊಳ್ಳಿ. ಆಸ್ಪತ್ರೆಗಲ್ಲಿ ರೋಗ ಲಕ್ಷಣದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಝೀಕಾ ವೈರಸ್ಗೆ ನಿಖರವಾದ ಔಷಧಿ ಇಲ್ಲ. ಯಾರೂ ಕೂಡ ಝೀಕಾ ವೈರಸ್ ಬಗ್ಗೆ ಅಸಡ್ಡೆ ಮಾಡಬೇಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…