ದೇಶ- ವಿದೇಶ

ಮತ್ತೆ ವೇಗವಾಗಿ ಹಬ್ಬುತ್ತಿದೆ ಝೀಕಾ ವೈರಸ್:‌ ಮಳೆಯಿಂದ ಮತ್ತಷ್ಟು ಉಲ್ಬಣ

ನವದೆಹಲಿ: ಝೀಕಾ ವೈರಸ್‌ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ.

ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ ಹೆಚ್ಚಾಗಿದೆ.

ವೈದ್ಯರ ಪ್ರಕಾರ ಈ ವೈರಸ್‌ ಸೊಳ್ಳೆ ಕಡಿತದಿಂದ ಹರಡುತ್ತದೆ ಮತ್ತು ಮಳೆಗಾಲದಲ್ಲಿ ಇದರ ಅಪಾಯ ಹೆಚ್ಚು. ಝೀಕಾ ವೈರಸ್‌ ಸೋಂಕು ಗರ್ಭಿಣಿಯರಿಗೆ ಹೆಚ್ಚು ಹಾನಿಯನ್ನುಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ಜನರು ಈ ವೈರಸ್‌ನ್ನು ತಪ್ಪಿಸಲು ಪ್ರಯತ್ನಿಸಬೇಕು ಮತ್ತು ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಬೇಕು.

ಈಡಿಸ್‌ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್‌ ಹರಡುತ್ತದೆ. ಮಳೆಯಲ್ಲಿ ಅಪಾಯದ ಪ್ರಮಾಣವು ಹೆಚ್ಚಾಗುತ್ತದೆ. ಡೆಂಗ್ಯೂ ಮತ್ತು ಚಿಕನ್‌ಗುನ್ಯಾದಂತೆ ಝೀಕಾ ವೈರಸ್‌ ಕೂಡಾ ಒಂದು ಸೋಂಕು. ಇದರ ಸೋಂಕಿಗೆ ಒಳಗಾದಾಗ ಜನರು ಜ್ವರ, ತಲೆನೋವು, ಕೀಲುನೋವು, ಸ್ನಾಯುನೋವು, ಕೆಂಪು ಕಣ್ಣುಗಳು ಮತ್ತು ಚರ್ಮದ ದದ್ದುಗಳಂತಹ ರೋಗಲಕ್ಷಣಗಳು ಕಂಡು ಬರುತ್ತವೆ.

ಆದ್ದರಿಂದ ಎಲ್ಲರೂ ಕೂಡ ತಪಾಸಣೆ ಮಾಡಿಸಿಕೊಳ್ಳಿ. ಆಸ್ಪತ್ರೆಗಲ್ಲಿ ರೋಗ ಲಕ್ಷಣದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಝೀಕಾ ವೈರಸ್‌ಗೆ ನಿಖರವಾದ ಔಷಧಿ ಇಲ್ಲ. ಯಾರೂ ಕೂಡ ಝೀಕಾ ವೈರಸ್‌ ಬಗ್ಗೆ ಅಸಡ್ಡೆ ಮಾಡಬೇಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

48 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

58 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago