ದೇಶ- ವಿದೇಶ

ಮತ್ತೆ ವೇಗವಾಗಿ ಹಬ್ಬುತ್ತಿದೆ ಝೀಕಾ ವೈರಸ್:‌ ಮಳೆಯಿಂದ ಮತ್ತಷ್ಟು ಉಲ್ಬಣ

ನವದೆಹಲಿ: ಝೀಕಾ ವೈರಸ್‌ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ.

ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ ಹೆಚ್ಚಾಗಿದೆ.

ವೈದ್ಯರ ಪ್ರಕಾರ ಈ ವೈರಸ್‌ ಸೊಳ್ಳೆ ಕಡಿತದಿಂದ ಹರಡುತ್ತದೆ ಮತ್ತು ಮಳೆಗಾಲದಲ್ಲಿ ಇದರ ಅಪಾಯ ಹೆಚ್ಚು. ಝೀಕಾ ವೈರಸ್‌ ಸೋಂಕು ಗರ್ಭಿಣಿಯರಿಗೆ ಹೆಚ್ಚು ಹಾನಿಯನ್ನುಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ಜನರು ಈ ವೈರಸ್‌ನ್ನು ತಪ್ಪಿಸಲು ಪ್ರಯತ್ನಿಸಬೇಕು ಮತ್ತು ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಬೇಕು.

ಈಡಿಸ್‌ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್‌ ಹರಡುತ್ತದೆ. ಮಳೆಯಲ್ಲಿ ಅಪಾಯದ ಪ್ರಮಾಣವು ಹೆಚ್ಚಾಗುತ್ತದೆ. ಡೆಂಗ್ಯೂ ಮತ್ತು ಚಿಕನ್‌ಗುನ್ಯಾದಂತೆ ಝೀಕಾ ವೈರಸ್‌ ಕೂಡಾ ಒಂದು ಸೋಂಕು. ಇದರ ಸೋಂಕಿಗೆ ಒಳಗಾದಾಗ ಜನರು ಜ್ವರ, ತಲೆನೋವು, ಕೀಲುನೋವು, ಸ್ನಾಯುನೋವು, ಕೆಂಪು ಕಣ್ಣುಗಳು ಮತ್ತು ಚರ್ಮದ ದದ್ದುಗಳಂತಹ ರೋಗಲಕ್ಷಣಗಳು ಕಂಡು ಬರುತ್ತವೆ.

ಆದ್ದರಿಂದ ಎಲ್ಲರೂ ಕೂಡ ತಪಾಸಣೆ ಮಾಡಿಸಿಕೊಳ್ಳಿ. ಆಸ್ಪತ್ರೆಗಲ್ಲಿ ರೋಗ ಲಕ್ಷಣದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಝೀಕಾ ವೈರಸ್‌ಗೆ ನಿಖರವಾದ ಔಷಧಿ ಇಲ್ಲ. ಯಾರೂ ಕೂಡ ಝೀಕಾ ವೈರಸ್‌ ಬಗ್ಗೆ ಅಸಡ್ಡೆ ಮಾಡಬೇಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago