ನವದೆಹಲಿ: ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ ಹೆಚ್ಚಾಗಿದೆ.
ವೈದ್ಯರ ಪ್ರಕಾರ ಈ ವೈರಸ್ ಸೊಳ್ಳೆ ಕಡಿತದಿಂದ ಹರಡುತ್ತದೆ ಮತ್ತು ಮಳೆಗಾಲದಲ್ಲಿ ಇದರ ಅಪಾಯ ಹೆಚ್ಚು. ಝೀಕಾ ವೈರಸ್ ಸೋಂಕು ಗರ್ಭಿಣಿಯರಿಗೆ ಹೆಚ್ಚು ಹಾನಿಯನ್ನುಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ಜನರು ಈ ವೈರಸ್ನ್ನು ತಪ್ಪಿಸಲು ಪ್ರಯತ್ನಿಸಬೇಕು ಮತ್ತು ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಬೇಕು.
ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಮಳೆಯಲ್ಲಿ ಅಪಾಯದ ಪ್ರಮಾಣವು ಹೆಚ್ಚಾಗುತ್ತದೆ. ಡೆಂಗ್ಯೂ ಮತ್ತು ಚಿಕನ್ಗುನ್ಯಾದಂತೆ ಝೀಕಾ ವೈರಸ್ ಕೂಡಾ ಒಂದು ಸೋಂಕು. ಇದರ ಸೋಂಕಿಗೆ ಒಳಗಾದಾಗ ಜನರು ಜ್ವರ, ತಲೆನೋವು, ಕೀಲುನೋವು, ಸ್ನಾಯುನೋವು, ಕೆಂಪು ಕಣ್ಣುಗಳು ಮತ್ತು ಚರ್ಮದ ದದ್ದುಗಳಂತಹ ರೋಗಲಕ್ಷಣಗಳು ಕಂಡು ಬರುತ್ತವೆ.
ಆದ್ದರಿಂದ ಎಲ್ಲರೂ ಕೂಡ ತಪಾಸಣೆ ಮಾಡಿಸಿಕೊಳ್ಳಿ. ಆಸ್ಪತ್ರೆಗಲ್ಲಿ ರೋಗ ಲಕ್ಷಣದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಝೀಕಾ ವೈರಸ್ಗೆ ನಿಖರವಾದ ಔಷಧಿ ಇಲ್ಲ. ಯಾರೂ ಕೂಡ ಝೀಕಾ ವೈರಸ್ ಬಗ್ಗೆ ಅಸಡ್ಡೆ ಮಾಡಬೇಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…