ದೇಶ- ವಿದೇಶ

ರಕ್ಷಣಾ ಕ್ಷೇತ್ರದಲ್ಲಿ ಭಾರತ-ಸಿಂಗಾಪುರ ಪರಸ್ಪರ ಒಪ್ಪಂದ

ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಈ ಎರಡು ದೇಶಗಳು ಪರಸ್ಪರ ಸಹಕಾರವನ್ನು ವ್ಯಕ್ತಪಡಿಸುತ್ತವೆ. ಹೀಗಾಗಿ ಯಾಂತ್ರೀಕೃತ ಹಾಗೂ ಕೃತಕ ಬುದ್ಧಿಮತ್ತೆಯನ್ನು ಉತ್ತೇಜಿಸುವ ಸಲುವಾಗಿ ಆರನೇ ಭಾರತ-ಸಿಂಗಾಪುರ ರಕ್ಷಣಾ ಸಂವಾದ ಕಾರ್ಯಕ್ರಮದಲ್ಲಿ ಈ ಮಾತುಕತೆ ನಡೆಸಲಾಗಿದೆ. ಉಭಯ ದೇಶಗಳ ಜಂಟಿ ಮಿಲಿಟರಿ ತರಬೇತಿ ಸೇನೆಯ ದ್ವಿಪಕ್ಷೀಯ ಒಪ್ಪಂದವನ್ನು ಮುಂದಿನ ಐದು ವರ್ಷಗಳವರೆಗೂ ವಿಸ್ತರಿಸಲು ತೀರ್ಮಾನಿಸುವ ಮುಖಾಂತರ ಒಪ್ಪಂದ ಮಾಡಿಕೊಂಡಿವೆ ಎಂದು ಹೇಳಲಾಗಿದೆ.

ಇನ್ನು ಸೈಬರ್‌ ಭದ್ರತೆಯ ಕ್ಷೇತ್ರಗಳಲ್ಲಿಯೂ ಸಹಕಾರವನ್ನು ಮುಂದುವರಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಸಿಂಗಾಪುರ ರಕ್ಷಣಾ ಸಚಿವ ಎನ್.ಜಿ.ಇಂಗ್‌ ಹೆನ್‌ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

28 mins ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

36 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

2 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

7 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

7 hours ago