ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ.
ಪಾಕ್ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ ಯಾವ ರೀತಿಯಲ್ಲೂ ಊಹಿಸದ ಹಾಗೆ ಭಾರತೀಯ ಸೇನೆ ದಾಳಿ ಮುಂದುವರಿಸಿದ್ದು, ಪಾಕಿಸ್ತಾನ ಪತರುಗುಟ್ಟುವಂತೆ ಮಾಡಿದೆ.
ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮೂರು ಸೇನಾಪಡೆಗಳ ಮುಖ್ಯಸ್ಥರು ಭೇಟಿ ನೀಡಿದ್ದು, ಮೋದಿ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇಡಿಎಸ್ ಅನಿಲ್ ಚೌಹಾಣ್ ಸಹ ಹಾಜರಿದ್ದರು.
ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್ ಅಹಮ್ಮದ್ ಖಾನ್
ಸಭೆಯಲ್ಲಿ ಪಾಕ್ ಜೊತೆಗಿನ ಸಂಘರ್ಷದ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇನಾಪಡೆ ಮುಖ್ಯಸ್ಥರ ಜೊತೆ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನು ಪಾಕ್ ವಿರುದ್ಧ ಭಾರತದ ಮುಂದಿನ ಹೆಜ್ಜೆ ಏನು ಎನ್ನುವುದು ತೀವ್ರ ಕೂತೂಹಲ ಮೂಡಿಸಿದೆ. ಆದರೆ ಪಾಕ್ ಶರಣಾಗುವವರೆಗೂ ಭಾರತ ಯುದ್ಧ ನಿಲ್ಲಿಸಲ್ಲ ಎಂದು ಹೇಳಲಾಗುತ್ತಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…