ಭಾರತ-ಪಾಕ್‌ ನಡುವೆ ಮುಂದುವರಿದ ಸಮರ: ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ.

ಪಾಕ್‌ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ ಯಾವ ರೀತಿಯಲ್ಲೂ ಊಹಿಸದ ಹಾಗೆ ಭಾರತೀಯ ಸೇನೆ ದಾಳಿ ಮುಂದುವರಿಸಿದ್ದು, ಪಾಕಿಸ್ತಾನ ಪತರುಗುಟ್ಟುವಂತೆ ಮಾಡಿದೆ.

ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮೂರು ಸೇನಾಪಡೆಗಳ ಮುಖ್ಯಸ್ಥರು ಭೇಟಿ ನೀಡಿದ್ದು, ಮೋದಿ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಇಡಿಎಸ್‌ ಅನಿಲ್‌ ಚೌಹಾಣ್‌ ಸಹ ಹಾಜರಿದ್ದರು.

ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ 

ಸಭೆಯಲ್ಲಿ ಪಾಕ್‌ ಜೊತೆಗಿನ ಸಂಘರ್ಷದ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇನಾಪಡೆ ಮುಖ್ಯಸ್ಥರ ಜೊತೆ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನು ಪಾಕ್‌ ವಿರುದ್ಧ ಭಾರತದ ಮುಂದಿನ ಹೆಜ್ಜೆ ಏನು ಎನ್ನುವುದು ತೀವ್ರ ಕೂತೂಹಲ ಮೂಡಿಸಿದೆ. ಆದರೆ ಪಾಕ್‌ ಶರಣಾಗುವವರೆಗೂ ಭಾರತ ಯುದ್ಧ ನಿಲ್ಲಿಸಲ್ಲ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago