ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂಸತ್‌ ಆವರಣದಲ್ಲೇ ಇಂಡಿಯಾ ಬ್ಲಾಕ್‌ ಸಂಸದರ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರವು ತನಿಖೆ ನಡೆಸಬೇಕೆಂದು ಸಂಸತ್‌ ಭವನದ ಮುಂದೆ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ಮೂಲಕ ಆಗ್ರಹಿಸಿದರು.

ಇಂಡಿಯಾ ಒಕ್ಕೂಟದ ಕಾಂಗ್ರೆಸ್‌, ಎಎಪಿ, ಆರ್‌ಜೆಡಿ, ಶಿವಸೇನೆ(ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿ ಅದಾನಿ ಬಂಧನಕ್ಕೆ ಒತ್ತಾಯಿಸಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಎಪಿಯ ಸಂಜಯ್‌ ಸಿಂಗ್‌, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಶಿವಸೇನೆಯ ಅರವಿಂದ್‌ ಸಾವಂತ್‌ ಅವರು ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ಪ್ರತಿಭಟಿಸುವ ಮೂಲಕ ಅದಾನಿ ಬಂಧನಕ್ಕೆ ಪಟ್ಟು ಹಿಡಿದ ಘಟನೆ ನಡೆಯಿತು.

ಲಂಚ ಮತ್ತು ವಂಚನೆ ಆರೋಪದ ಮೇಲೆ ಅದಾನಿ ಗ್ರೂಪ್‌ ಕಂಪನಿಯ ಅಧ್ಯಕ್ಷ ಮತ್ತು ಅಧಿಕಾರಿಗಳ ಮೇಲೆ ಯುಎಸ್‌ ಪ್ರಾಸಿಕ್ಯೂಟರ್‌ಗಳು ದೂಷಿಸಿದ್ದರು. ಈಗ ಕಾಂಗ್ರೆಸ್‌ಗೆ ಆಡಳಿತ ಪಕ್ಷದ ವಿರುದ್ಧ ಮಾತನಾಡಲು ಹೊಸ ಅಸ್ತ್ರ ಸಿಕ್ಕಿದೆ. ಈಗ ರಾಹುಲ್‌ ಗಾಂಧಿ ಈ ಯುಎಸ್‌ನ ಆರೋಪಗಳನ್ನು ಇಟ್ಟುಕೊಂಡು ಅದಾನಿ ಗ್ರೂಪ್‌ ಮೇಲಿನ ತನಿಖೆಗಾಗಿ ಜಂಟಿ ಸಂಸದೀಯ ಸಮಿತಿ ರಚನೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

7 mins ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

15 mins ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

21 mins ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

23 mins ago

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…

25 mins ago

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.…

27 mins ago