ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರವು ತನಿಖೆ ನಡೆಸಬೇಕೆಂದು ಸಂಸತ್ ಭವನದ ಮುಂದೆ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ಮೂಲಕ ಆಗ್ರಹಿಸಿದರು.
ಇಂಡಿಯಾ ಒಕ್ಕೂಟದ ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನೆ(ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿ ಅದಾನಿ ಬಂಧನಕ್ಕೆ ಒತ್ತಾಯಿಸಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಎಪಿಯ ಸಂಜಯ್ ಸಿಂಗ್, ಆರ್ಜೆಡಿಯ ಮಿಸಾ ಭಾರತಿ ಮತ್ತು ಶಿವಸೇನೆಯ ಅರವಿಂದ್ ಸಾವಂತ್ ಅವರು ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ಪ್ರತಿಭಟಿಸುವ ಮೂಲಕ ಅದಾನಿ ಬಂಧನಕ್ಕೆ ಪಟ್ಟು ಹಿಡಿದ ಘಟನೆ ನಡೆಯಿತು.
ಲಂಚ ಮತ್ತು ವಂಚನೆ ಆರೋಪದ ಮೇಲೆ ಅದಾನಿ ಗ್ರೂಪ್ ಕಂಪನಿಯ ಅಧ್ಯಕ್ಷ ಮತ್ತು ಅಧಿಕಾರಿಗಳ ಮೇಲೆ ಯುಎಸ್ ಪ್ರಾಸಿಕ್ಯೂಟರ್ಗಳು ದೂಷಿಸಿದ್ದರು. ಈಗ ಕಾಂಗ್ರೆಸ್ಗೆ ಆಡಳಿತ ಪಕ್ಷದ ವಿರುದ್ಧ ಮಾತನಾಡಲು ಹೊಸ ಅಸ್ತ್ರ ಸಿಕ್ಕಿದೆ. ಈಗ ರಾಹುಲ್ ಗಾಂಧಿ ಈ ಯುಎಸ್ನ ಆರೋಪಗಳನ್ನು ಇಟ್ಟುಕೊಂಡು ಅದಾನಿ ಗ್ರೂಪ್ ಮೇಲಿನ ತನಿಖೆಗಾಗಿ ಜಂಟಿ ಸಂಸದೀಯ ಸಮಿತಿ ರಚನೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…