ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ರಾಜಸ್ಥಾನದ ಜೈಪುರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ವಿವಿಧ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.
ಕಳೆದ 10 ವರ್ಷಗಳಿಂದ ದೇಶದಲ್ಲಿ ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆ ಹೆಚ್ಚಾಗುತ್ತಿದೆ. ಇವೆಲ್ಲವನ್ನೂ ಸರ್ಕಾರವೇ ಉತ್ತೇಜಿಸುತ್ತಿದೆ. ಮೋದಿ ಸರ್ಕಾರ ಏನು ಮಾಡಿದೆ ಎಂಬುದು ನಮ್ಮೆಲ್ಲರ ಮುಂದಿದೆ. ಎಲ್ಲೆಡೆ ಅನ್ಯಾಯದ ಕತ್ತಲೆ ಆವರಿಸಿದೆ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕು, ನ್ಯಾಯದ ಬೆಳಕನ್ನು ತರಬೇಕು ಎಂದು ಅವರು ಹೇಳಿದರು.
ತಮ್ಮನ್ನು ತಾವು ಶೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ಬಿಜೆಪಿ ಸರ್ಕಾರವು ಸರ್ವಾಧಿಕಾರಿಯಾಗಿದ್ದು, ನಾವೇಲ್ಲರೂ ಇದಕ್ಕೆ ಉತ್ತರ ನೀಡುತ್ತೇವೆ ಎಂದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…