ನವದೆಹಲಿ: ಭಾರತ ಅತೀಹೆಚ್ಚು ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. ಹಾಗಾಗಿ ಜಾಗತಿಕ ಆಹಾರ ಮತ್ತು ಪೌಷ್ಠಿಕತೆಯ ಭದ್ರತೆಗೆ ಮಾರ್ಗೋಪಾಯ ಹುಡುಕುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಬಗ್ಗೆ 32ನೇ ಕೃಷಿ ಅರ್ಥಶಾಸ್ತ್ರಜ್ಞರ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, 2024-25ನೇ ಸಾಲಿನ ಬಜೆಟ್ನಲ್ಲಿ ಸುಸ್ಥಿರ ಕೃಷಿ ಮತ್ತು ಹವಾಮಾನ ಆಧಾರಿತ ಕೃಷಿ ಚಟುವಟಿಕೆಗಳಿಗೆ ಒತ್ತು ನೀಡಲಾಗಿದೆ ಎಂದರು.
ಭಾರತ ಮೊದಲು ಕೃಷಿ ಮತ್ತು ಆಹಾರ ಭದ್ರತೆಯ ಸವಾಲುಗಳನ್ನು ಎದುರಿಸುತ್ತಿತ್ತು. ಪ್ರಸ್ತುತ ಹಾಲು, ಬೇಳೆಕಾಳು ಮತ್ತು ಸಾಂಬಾರು ಪದಾರ್ಥಗಳ ಉತ್ಪಾದನೆಯಲ್ಲಿ ಭಾರತ ಭಾರೀ ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಆಹಾರ ಧಾನ್ಯಗಳು, ಹಣ್ಣುಗಳು, ತರಕಾರಿ, ಹತ್ತಿ, ಸಕ್ಕರೆ ಮತ್ತು ಚಹಾ ಉತ್ಪಾದನೆಯಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ ಎಂದರು.
ಆದ್ದರಿಂದಲೇ ಕೇಂದ್ರ ಬಜೆಟ್ನಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದೆ. ಸಾಂಬಾರು ಪದಾರ್ಥಗಳ ಉತ್ಪಾದನೆಯಲ್ಲಿ ಭಾರತ ಇನ್ನೂ ಹೆಚ್ಚಿನ ಗುರಿ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…